ಮೂಡಬಿದಿರೆಯಲ್ಲಿ ಶಾಂತಿ ಭಂಗ ಉಂಟು ಮಾಡುವ ಕೋಮುವಾದಿಗಳ ಯತ್ನಕ್ಕೆ ಮೂಡಬಿದಿರೆ ಇನ್ಸ್ಪೆಕ್ಟರ್ ಕಡಕ್ ಸಂದೇಶ ರವಾನಿಸಿದ್ದಾರೆ.
ಈ ಮೂಲಕ ಶಾಂತಿಪ್ರಿಯ ಜನರ ಪಾಲಿಗೆ ಹೀರೋ ಆಗಿ ಕಂಡಿದ್ದಾರೆ ಇನ್ಸ್ಪೆಕ್ಟರ್. ಕಳೆದ ಎರಡ್ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಇನ್ಸ್ಪೆಕ್ಟರ್ ಸಂದೇಶ್ ಅವರು ಸಾರ್ವಜನಿಕ ಸ್ಥಳದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದ ಹಸಿರು ಧ್ವಜವೊಂದನ್ನು ತೆರವುಗೊಳಿಸುವ ಮತ್ತು ಕ್ರಮಕೈಗೊಳ್ಳದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುವ ವೀಡಿಯೋ ಸಾಕಷ್ಟು ವೈರಲ್ ಆಗಿದೆ.
ಮೂಡುಬಿದಿರೆ ಸಮೀಪದ ಪುಚ್ಚಮೊಗರಿನ ಶಾಂತಿರಾಜ ಕಾಲನಿಯಲ್ಲಿ ಕಟ್ಟೆಯೊಂದರಲ್ಲಿ ಹಸಿರು ಧ್ವಜ ಹಾಕಿ ಹೋಗಿದ್ದರು. ಈ ಮೂಲಕ ಈ ಭಾಗದ ಶಾಂತಿಪ್ರಿಯ ಜನರ ಶಾಂತಿ ಕೆಡಿಸಲೆತ್ನಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ಇನ್ಸ್ಪೆಕ್ಟರ್ ಸಂದೇಶ್ ಅವರು ತೆರಳಿದ್ದಾರೆ. ಆ ಧ್ವಜವನ್ನು ತೆರವುಗೊಳಿಸಿದ್ದಾರೆ. ಮಾತ್ರವಲ್ಲದೆ ಕ್ರಮ ಕೈಗೊಳ್ಳದ ಪಿ.ಡಿ.ಒ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿಯೂ ಹಾಕಲಾದ ಕೇಸರಿ ಧ್ವಜವನ್ನು ಪುರಸಭಾ ಸಹಕಾರದೊಂದಿಗೆ ಸಾರ್ವಜನಿಕ ದೂರಿನ ಮೇರೆಗೆ ತೆರವುಗೊಳಿಸಿದ್ದಾರೆ. ಈ ಮೂಲಕ ಸಾರ್ವಜನಿಕ ಸೌಹಾರ್ದತೆಗೆ ಮೆಚ್ಚುಗೆಯ ನಡೆ ತೋರಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…