ಮೂಡಬಿದಿರೆಯಲ್ಲಿ ಶಾಂತಿ ಭಂಗ ಉಂಟು ಮಾಡುವ ಕೋಮುವಾದಿಗಳ ಯತ್ನಕ್ಕೆ ಮೂಡಬಿದಿರೆ ಇನ್ಸ್ಪೆಕ್ಟರ್ ಕಡಕ್ ಸಂದೇಶ ರವಾನಿಸಿದ್ದಾರೆ.
ಈ ಮೂಲಕ ಶಾಂತಿಪ್ರಿಯ ಜನರ ಪಾಲಿಗೆ ಹೀರೋ ಆಗಿ ಕಂಡಿದ್ದಾರೆ ಇನ್ಸ್ಪೆಕ್ಟರ್. ಕಳೆದ ಎರಡ್ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಇನ್ಸ್ಪೆಕ್ಟರ್ ಸಂದೇಶ್ ಅವರು ಸಾರ್ವಜನಿಕ ಸ್ಥಳದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದ ಹಸಿರು ಧ್ವಜವೊಂದನ್ನು ತೆರವುಗೊಳಿಸುವ ಮತ್ತು ಕ್ರಮಕೈಗೊಳ್ಳದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುವ ವೀಡಿಯೋ ಸಾಕಷ್ಟು ವೈರಲ್ ಆಗಿದೆ.
ಮೂಡುಬಿದಿರೆ ಸಮೀಪದ ಪುಚ್ಚಮೊಗರಿನ ಶಾಂತಿರಾಜ ಕಾಲನಿಯಲ್ಲಿ ಕಟ್ಟೆಯೊಂದರಲ್ಲಿ ಹಸಿರು ಧ್ವಜ ಹಾಕಿ ಹೋಗಿದ್ದರು. ಈ ಮೂಲಕ ಈ ಭಾಗದ ಶಾಂತಿಪ್ರಿಯ ಜನರ ಶಾಂತಿ ಕೆಡಿಸಲೆತ್ನಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ಇನ್ಸ್ಪೆಕ್ಟರ್ ಸಂದೇಶ್ ಅವರು ತೆರಳಿದ್ದಾರೆ. ಆ ಧ್ವಜವನ್ನು ತೆರವುಗೊಳಿಸಿದ್ದಾರೆ. ಮಾತ್ರವಲ್ಲದೆ ಕ್ರಮ ಕೈಗೊಳ್ಳದ ಪಿ.ಡಿ.ಒ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿಯೂ ಹಾಕಲಾದ ಕೇಸರಿ ಧ್ವಜವನ್ನು ಪುರಸಭಾ ಸಹಕಾರದೊಂದಿಗೆ ಸಾರ್ವಜನಿಕ ದೂರಿನ ಮೇರೆಗೆ ತೆರವುಗೊಳಿಸಿದ್ದಾರೆ. ಈ ಮೂಲಕ ಸಾರ್ವಜನಿಕ ಸೌಹಾರ್ದತೆಗೆ ಮೆಚ್ಚುಗೆಯ ನಡೆ ತೋರಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…