ಮೂಡಬಿದಿರೆಯಲ್ಲಿ ಶಾಂತಿ ಭಂಗ ಉಂಟು ಮಾಡುವ ಕೋಮುವಾದಿಗಳ ಯತ್ನಕ್ಕೆ ಮೂಡಬಿದಿರೆ ಇನ್ಸ್ಪೆಕ್ಟರ್ ಕಡಕ್ ಸಂದೇಶ ರವಾನಿಸಿದ್ದಾರೆ.
ಈ ಮೂಲಕ ಶಾಂತಿಪ್ರಿಯ ಜನರ ಪಾಲಿಗೆ ಹೀರೋ ಆಗಿ ಕಂಡಿದ್ದಾರೆ ಇನ್ಸ್ಪೆಕ್ಟರ್. ಕಳೆದ ಎರಡ್ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಇನ್ಸ್ಪೆಕ್ಟರ್ ಸಂದೇಶ್ ಅವರು ಸಾರ್ವಜನಿಕ ಸ್ಥಳದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದ ಹಸಿರು ಧ್ವಜವೊಂದನ್ನು ತೆರವುಗೊಳಿಸುವ ಮತ್ತು ಕ್ರಮಕೈಗೊಳ್ಳದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುವ ವೀಡಿಯೋ ಸಾಕಷ್ಟು ವೈರಲ್ ಆಗಿದೆ.
ಮೂಡುಬಿದಿರೆ ಸಮೀಪದ ಪುಚ್ಚಮೊಗರಿನ ಶಾಂತಿರಾಜ ಕಾಲನಿಯಲ್ಲಿ ಕಟ್ಟೆಯೊಂದರಲ್ಲಿ ಹಸಿರು ಧ್ವಜ ಹಾಕಿ ಹೋಗಿದ್ದರು. ಈ ಮೂಲಕ ಈ ಭಾಗದ ಶಾಂತಿಪ್ರಿಯ ಜನರ ಶಾಂತಿ ಕೆಡಿಸಲೆತ್ನಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ಇನ್ಸ್ಪೆಕ್ಟರ್ ಸಂದೇಶ್ ಅವರು ತೆರಳಿದ್ದಾರೆ. ಆ ಧ್ವಜವನ್ನು ತೆರವುಗೊಳಿಸಿದ್ದಾರೆ. ಮಾತ್ರವಲ್ಲದೆ ಕ್ರಮ ಕೈಗೊಳ್ಳದ ಪಿ.ಡಿ.ಒ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿಯೂ ಹಾಕಲಾದ ಕೇಸರಿ ಧ್ವಜವನ್ನು ಪುರಸಭಾ ಸಹಕಾರದೊಂದಿಗೆ ಸಾರ್ವಜನಿಕ ದೂರಿನ ಮೇರೆಗೆ ತೆರವುಗೊಳಿಸಿದ್ದಾರೆ. ಈ ಮೂಲಕ ಸಾರ್ವಜನಿಕ ಸೌಹಾರ್ದತೆಗೆ ಮೆಚ್ಚುಗೆಯ ನಡೆ ತೋರಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…