ಪುತ್ತೂರು; ಮೂಡಬಿದ್ರೆಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು ೩೫೦ಮಂದಿ ಉದ್ಯೋಗ ಆಕಾಂಕ್ಷಿಗಳು ಪುತ್ತೂರಿನಿಂದ ತೆರಳಿದ್ದಾರೆ.
ಉದ್ಯೋಗ ಮೇಳಕ್ಕೆ ತೆರಳುವ ಆಕಾಂಕ್ಷಿಗಳಿಗೆ ಶಾಸಕರ ಟ್ರಸ್ಟ್ ಮೂಲಕ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್ ಕರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಶಾಂತಿನಗರ, ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಆಳ್ವಾಸ್ಗೆ ತೆರಳುವ ಮಂದಿಗೆ ಬಸ್ನ ವ್ಯವಸ್ಥೆ ಹಾಗೂ ಇತರೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ ಟ್ರಸ್ಟ್ ಮೂಲಕ ಮೆಸ್ಕಾಂನಲ್ಲಿ ವಿದ್ಯುತ್ ಕಂಬ ಹತ್ತುವ ತರಬೇತಿ ಮತ್ತು ಪೊಲೀಸ್ ತರಬೇತಿಯನ್ನು ಆಯೋಜಿಸಲಾಗುವುದು. ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಸೂಕ್ತ ಜೀವನ ಭದ್ರತೆಯನ್ನು ನೀಡುವಲ್ಲಿ ಟ್ರಸ್ಟ್ ನಿರಂತರವಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.
ಉದ್ಯೋಗ ಮೇಳದ ಆಯೋಜಕರಾದ ನಿಹಾಲ್ ಶೆಟ್ಟಿ ಮಾತನಾಡಿ ವಿವಿಧ ಕಂಪೆನಿಗಳಲ್ಲಿ ಉದ್ಯೋಗಕ್ಕಾಗಿ ಸಂರ್ಶನಕ್ಕೆ ತೆರಳುವ ಆಕಾಂಕ್ಷಿಗಳು ಯಾವ ರೀತಿ ಸಂರ್ಶನವನ್ನು ಎದುರಿಸಬೇಕು ಎಂಬುದರ ಬಗ್ಗೆ ವಿವರಿಸಿದರು. ಉದ್ಯೋಗ ಯಾವುದೇ ಕಂಪೆನಿಯಲ್ಲಿ ದೊರೆತರೂ ನಾವು ಅಲ್ಲಿ ಕೆಲಸ ಮಾಡುವ ಆಸಕ್ತಿಯನ್ನು ಹೊಂದಿರಬೇಕು, ಉದ್ಯೋಗದಿಂದ ಯಾರೂ ವಂಚಿತರಾಗಬಾರದು. ವಿದ್ಯಾವಂತ ನಿರುದ್ಯೋಗಿಗಳು ಸದಾ ಉದ್ಯೋಗ ಹುಡುಕುವಲ್ಲಿ ಮುತುರ್ಜಿವಹಿಸಬೇಕು ಎಂದು ಹೇಳಿದರು.
ಕರ್ಯಕ್ರಮದಲ್ಲಿ ಶಾಸಕರ ಕಚೇರಿ ಸಿಂಬದಿಗಳಾದ ಪ್ರದೀಪ್, ಜುನೈದ್ ಬಡಗನ್ನೂರು, ಯೋಗೀಶ್ ಸಾಮಾನಿ, ಅಕ್ರಮಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ರಿತೇಶ್ ಶೆಟ್ಟಿ ಮಂಗಳೂರು, ನಗರ ಸಭಾ ಸದಸ್ಯ ರಿಯಾಝ್ ಉಪಸ್ಥಿತರಿದ್ದರು.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…