ಪುತ್ತೂರು; ಮೂಡಬಿದ್ರೆಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು ೩೫೦ಮಂದಿ ಉದ್ಯೋಗ ಆಕಾಂಕ್ಷಿಗಳು ಪುತ್ತೂರಿನಿಂದ ತೆರಳಿದ್ದಾರೆ.
ಉದ್ಯೋಗ ಮೇಳಕ್ಕೆ ತೆರಳುವ ಆಕಾಂಕ್ಷಿಗಳಿಗೆ ಶಾಸಕರ ಟ್ರಸ್ಟ್ ಮೂಲಕ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್ ಕರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಶಾಂತಿನಗರ, ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಆಳ್ವಾಸ್ಗೆ ತೆರಳುವ ಮಂದಿಗೆ ಬಸ್ನ ವ್ಯವಸ್ಥೆ ಹಾಗೂ ಇತರೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ ಟ್ರಸ್ಟ್ ಮೂಲಕ ಮೆಸ್ಕಾಂನಲ್ಲಿ ವಿದ್ಯುತ್ ಕಂಬ ಹತ್ತುವ ತರಬೇತಿ ಮತ್ತು ಪೊಲೀಸ್ ತರಬೇತಿಯನ್ನು ಆಯೋಜಿಸಲಾಗುವುದು. ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಸೂಕ್ತ ಜೀವನ ಭದ್ರತೆಯನ್ನು ನೀಡುವಲ್ಲಿ ಟ್ರಸ್ಟ್ ನಿರಂತರವಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.
ಉದ್ಯೋಗ ಮೇಳದ ಆಯೋಜಕರಾದ ನಿಹಾಲ್ ಶೆಟ್ಟಿ ಮಾತನಾಡಿ ವಿವಿಧ ಕಂಪೆನಿಗಳಲ್ಲಿ ಉದ್ಯೋಗಕ್ಕಾಗಿ ಸಂರ್ಶನಕ್ಕೆ ತೆರಳುವ ಆಕಾಂಕ್ಷಿಗಳು ಯಾವ ರೀತಿ ಸಂರ್ಶನವನ್ನು ಎದುರಿಸಬೇಕು ಎಂಬುದರ ಬಗ್ಗೆ ವಿವರಿಸಿದರು. ಉದ್ಯೋಗ ಯಾವುದೇ ಕಂಪೆನಿಯಲ್ಲಿ ದೊರೆತರೂ ನಾವು ಅಲ್ಲಿ ಕೆಲಸ ಮಾಡುವ ಆಸಕ್ತಿಯನ್ನು ಹೊಂದಿರಬೇಕು, ಉದ್ಯೋಗದಿಂದ ಯಾರೂ ವಂಚಿತರಾಗಬಾರದು. ವಿದ್ಯಾವಂತ ನಿರುದ್ಯೋಗಿಗಳು ಸದಾ ಉದ್ಯೋಗ ಹುಡುಕುವಲ್ಲಿ ಮುತುರ್ಜಿವಹಿಸಬೇಕು ಎಂದು ಹೇಳಿದರು.
ಕರ್ಯಕ್ರಮದಲ್ಲಿ ಶಾಸಕರ ಕಚೇರಿ ಸಿಂಬದಿಗಳಾದ ಪ್ರದೀಪ್, ಜುನೈದ್ ಬಡಗನ್ನೂರು, ಯೋಗೀಶ್ ಸಾಮಾನಿ, ಅಕ್ರಮಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ರಿತೇಶ್ ಶೆಟ್ಟಿ ಮಂಗಳೂರು, ನಗರ ಸಭಾ ಸದಸ್ಯ ರಿಯಾಝ್ ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…