ಪುತ್ತೂರು; ಮೂಡಬಿದ್ರೆಯ ಆಳ್ವಾಸ್ ಪ್ರಗತಿ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು ೩೫೦ಮಂದಿ ಉದ್ಯೋಗ ಆಕಾಂಕ್ಷಿಗಳು ಪುತ್ತೂರಿನಿಂದ ತೆರಳಿದ್ದಾರೆ.
ಉದ್ಯೋಗ ಮೇಳಕ್ಕೆ ತೆರಳುವ ಆಕಾಂಕ್ಷಿಗಳಿಗೆ ಶಾಸಕರ ಟ್ರಸ್ಟ್ ಮೂಲಕ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್ ಕರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಶಾಂತಿನಗರ, ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಆಳ್ವಾಸ್ಗೆ ತೆರಳುವ ಮಂದಿಗೆ ಬಸ್ನ ವ್ಯವಸ್ಥೆ ಹಾಗೂ ಇತರೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ ಟ್ರಸ್ಟ್ ಮೂಲಕ ಮೆಸ್ಕಾಂನಲ್ಲಿ ವಿದ್ಯುತ್ ಕಂಬ ಹತ್ತುವ ತರಬೇತಿ ಮತ್ತು ಪೊಲೀಸ್ ತರಬೇತಿಯನ್ನು ಆಯೋಜಿಸಲಾಗುವುದು. ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಸೂಕ್ತ ಜೀವನ ಭದ್ರತೆಯನ್ನು ನೀಡುವಲ್ಲಿ ಟ್ರಸ್ಟ್ ನಿರಂತರವಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.
ಉದ್ಯೋಗ ಮೇಳದ ಆಯೋಜಕರಾದ ನಿಹಾಲ್ ಶೆಟ್ಟಿ ಮಾತನಾಡಿ ವಿವಿಧ ಕಂಪೆನಿಗಳಲ್ಲಿ ಉದ್ಯೋಗಕ್ಕಾಗಿ ಸಂರ್ಶನಕ್ಕೆ ತೆರಳುವ ಆಕಾಂಕ್ಷಿಗಳು ಯಾವ ರೀತಿ ಸಂರ್ಶನವನ್ನು ಎದುರಿಸಬೇಕು ಎಂಬುದರ ಬಗ್ಗೆ ವಿವರಿಸಿದರು. ಉದ್ಯೋಗ ಯಾವುದೇ ಕಂಪೆನಿಯಲ್ಲಿ ದೊರೆತರೂ ನಾವು ಅಲ್ಲಿ ಕೆಲಸ ಮಾಡುವ ಆಸಕ್ತಿಯನ್ನು ಹೊಂದಿರಬೇಕು, ಉದ್ಯೋಗದಿಂದ ಯಾರೂ ವಂಚಿತರಾಗಬಾರದು. ವಿದ್ಯಾವಂತ ನಿರುದ್ಯೋಗಿಗಳು ಸದಾ ಉದ್ಯೋಗ ಹುಡುಕುವಲ್ಲಿ ಮುತುರ್ಜಿವಹಿಸಬೇಕು ಎಂದು ಹೇಳಿದರು.
ಕರ್ಯಕ್ರಮದಲ್ಲಿ ಶಾಸಕರ ಕಚೇರಿ ಸಿಂಬದಿಗಳಾದ ಪ್ರದೀಪ್, ಜುನೈದ್ ಬಡಗನ್ನೂರು, ಯೋಗೀಶ್ ಸಾಮಾನಿ, ಅಕ್ರಮಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ರಿತೇಶ್ ಶೆಟ್ಟಿ ಮಂಗಳೂರು, ನಗರ ಸಭಾ ಸದಸ್ಯ ರಿಯಾಝ್ ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…