ಮೂಡಬಿದಿರೆ: ಅಖಿಲ ಭಾರತ ಸಂತ ಸಮಿತಿ ಕರ್ನಾಟಕ ಪ್ರಾಂತ ಕಮಿಟಿ ಹಾಗೂ ಮೂಡುಬಿದಿರೆಯ ಶ್ರೀ ದಿಗಂಬರ ಜೈನ ಮಠದ ಸಂಯುಕ್ತ ಆಶ್ರಯದಲ್ಲಿ ಕೊಡಗು, ದ.ಕ ಹಾಗೂ ಉಡುಪಿ ಮೂರು ಜಿಲ್ಲೆಗಳ ಸಂತರ ಸಮಾವೇಶವು ಮಹಾವೀರ ಭವನದಲ್ಲಿ ಅಕ್ಟೋಬರ್ 9ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ, ಮಂಗಳೂರು ಚಿಲಿಂಬಿಯಲ್ಲಿರುವ ಓಂ ಶ್ರೀ ಮಠದ ಮಹಾಮಂಡಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಅವರು ಜೈನ ಮಠದ ರಮಾರಾಣಿ ಶೋಧ ಸಂಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಧರ್ಮರಕ್ಷಣೆ, ರಾಜ್ಯರಕ್ಷಣೆ, ಗೋರಕ್ಷಣೆ ಸಂತ ಸಮಿತಿಯ ಪ್ರಮುಖ ಆಧ್ಯತೆ. ಸನಾತನ ಸಂಸ್ಕೃತಿಗೆ ಶ್ರೇಷ್ಠ ಸ್ಥಾನಮಾನ ನೀಡುತ್ತಿರುವ ಮೂಡುಬಿದಿರೆ ಭಟ್ಟಾರಕ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಮಾವೇಶ ನಡೆಯುತ್ತಿರುವುದು ಸಂತಸ. ಆಯೋಧ್ಯೆ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಸಂತರ ಪಟ್ಟಿ, ವಾರಣಾಸಿಯಲ್ಲಿ ನಡೆಯುವ ಸಂಸ್ಕೃತಿ ಸಂಸತ್ತಿನಲ್ಲಿ ಭಾಗವಹಿಸುವುದು, ಕರ್ನಾಟಕದಲ್ಲಿ ಸಂತರು ಹಾಗೂ ಸನಾತನಿಗಳು ಎದುರಿಸುವ ವಿಷಯಗಳು, ಮುಜರಾಯಿ ಇಲಾಖೆಯಿಂದ ಮಠಗಳಿಗೆ ಅಗತ್ಯವಾದ ಅನುದಾನ ಲಭ್ಯವಾಗುವ ಕುರಿತು, ಸಂಘಟನಾ ವಿಪಲಿಕರಣ ಸಹಿತ ವಿವಿಧ ವಿಚಾರಗಳು ಸಮಾವೇಶದಲ್ಲಿ ಚರ್ಚೆಯಾಗಲಿದೆ ಎಂದರು.
ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಾತನಾಡಿ, ಸಂತರ ಹೊಂದಾಣಿಕೆ, ವೈಚಾರಿಕ ಚಿಂತನೆಗಳ ವಿನಿಮಯ, ಪರಸ್ಪರ ವಿಶ್ವಾಸವನ್ನು ಬೆಳೆಸುವಲ್ಲಿ ಈ ಸಮಾವೇಶ ನೆರವಾಗಲಿದೆ. ಧರ್ಮರಕ್ಷಣೆಗೆ ಈ ಸಮಾವೇಶವು ಉನ್ನತ ಕೊಡುಗೆ ನೀಡಲಿದೆ. ಕೆ.ಶ್ರೀಪತಿ ಭಟ್, ಬಾಹುಬಲಿ ಪ್ರಸಾದ್, ಬಸದಿಗಳ ಮೊಕ್ತೇಸರರು ಸೇರಿದಂತೆ 30 ಮಂದಿಯ ಸ್ವಾಗತ ಸಮಿತಿಯನ್ನು ಸಮಾವೇಶಕ್ಕಾಗಿ ರಚಿಸಲಾಗಿದೆ ಎಂದರು.
ಇನ್ನೂ ಈ ಸಂದರ್ಭದಲ್ಲಿ ರಾಜ್ಯ ಕಮಿಟಿಯ ಸಹ ಅಧ್ಯಕ್ಷೆ ಮಾತಾಶ್ರೀ ಓಂ ಶ್ರೀ ಶಿವಜ್ಞಾನಮಣಿ ಸರಸ್ವತಿ ಸಾಧ್ವಿ, ಬಸದಿಗಳ ಮೊಕ್ತೇಸರಾದ ಪಟ್ನಶೆಟ್ಟಿ ಸುಧೀಶ್ ಕುಮಾರ್, ಆನಡ್ಕ ದಿನೇಶ್ ಕುಮಾರ್ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…