ಮೂಡಬಿದಿರೆ: ಅಖಿಲ ಭಾರತ ಸಂತ ಸಮಿತಿ ಕರ್ನಾಟಕ ಪ್ರಾಂತ ಕಮಿಟಿ ಹಾಗೂ ಮೂಡುಬಿದಿರೆಯ ಶ್ರೀ ದಿಗಂಬರ ಜೈನ ಮಠದ ಸಂಯುಕ್ತ ಆಶ್ರಯದಲ್ಲಿ ಕೊಡಗು, ದ.ಕ ಹಾಗೂ ಉಡುಪಿ ಮೂರು ಜಿಲ್ಲೆಗಳ ಸಂತರ ಸಮಾವೇಶವು ಮಹಾವೀರ ಭವನದಲ್ಲಿ ಅಕ್ಟೋಬರ್ 9ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ, ಮಂಗಳೂರು ಚಿಲಿಂಬಿಯಲ್ಲಿರುವ ಓಂ ಶ್ರೀ ಮಠದ ಮಹಾಮಂಡಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಅವರು ಜೈನ ಮಠದ ರಮಾರಾಣಿ ಶೋಧ ಸಂಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಧರ್ಮರಕ್ಷಣೆ, ರಾಜ್ಯರಕ್ಷಣೆ, ಗೋರಕ್ಷಣೆ ಸಂತ ಸಮಿತಿಯ ಪ್ರಮುಖ ಆಧ್ಯತೆ. ಸನಾತನ ಸಂಸ್ಕೃತಿಗೆ ಶ್ರೇಷ್ಠ ಸ್ಥಾನಮಾನ ನೀಡುತ್ತಿರುವ ಮೂಡುಬಿದಿರೆ ಭಟ್ಟಾರಕ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಮಾವೇಶ ನಡೆಯುತ್ತಿರುವುದು ಸಂತಸ. ಆಯೋಧ್ಯೆ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಸಂತರ ಪಟ್ಟಿ, ವಾರಣಾಸಿಯಲ್ಲಿ ನಡೆಯುವ ಸಂಸ್ಕೃತಿ ಸಂಸತ್ತಿನಲ್ಲಿ ಭಾಗವಹಿಸುವುದು, ಕರ್ನಾಟಕದಲ್ಲಿ ಸಂತರು ಹಾಗೂ ಸನಾತನಿಗಳು ಎದುರಿಸುವ ವಿಷಯಗಳು, ಮುಜರಾಯಿ ಇಲಾಖೆಯಿಂದ ಮಠಗಳಿಗೆ ಅಗತ್ಯವಾದ ಅನುದಾನ ಲಭ್ಯವಾಗುವ ಕುರಿತು, ಸಂಘಟನಾ ವಿಪಲಿಕರಣ ಸಹಿತ ವಿವಿಧ ವಿಚಾರಗಳು ಸಮಾವೇಶದಲ್ಲಿ ಚರ್ಚೆಯಾಗಲಿದೆ ಎಂದರು.
ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಾತನಾಡಿ, ಸಂತರ ಹೊಂದಾಣಿಕೆ, ವೈಚಾರಿಕ ಚಿಂತನೆಗಳ ವಿನಿಮಯ, ಪರಸ್ಪರ ವಿಶ್ವಾಸವನ್ನು ಬೆಳೆಸುವಲ್ಲಿ ಈ ಸಮಾವೇಶ ನೆರವಾಗಲಿದೆ. ಧರ್ಮರಕ್ಷಣೆಗೆ ಈ ಸಮಾವೇಶವು ಉನ್ನತ ಕೊಡುಗೆ ನೀಡಲಿದೆ. ಕೆ.ಶ್ರೀಪತಿ ಭಟ್, ಬಾಹುಬಲಿ ಪ್ರಸಾದ್, ಬಸದಿಗಳ ಮೊಕ್ತೇಸರರು ಸೇರಿದಂತೆ 30 ಮಂದಿಯ ಸ್ವಾಗತ ಸಮಿತಿಯನ್ನು ಸಮಾವೇಶಕ್ಕಾಗಿ ರಚಿಸಲಾಗಿದೆ ಎಂದರು.
ಇನ್ನೂ ಈ ಸಂದರ್ಭದಲ್ಲಿ ರಾಜ್ಯ ಕಮಿಟಿಯ ಸಹ ಅಧ್ಯಕ್ಷೆ ಮಾತಾಶ್ರೀ ಓಂ ಶ್ರೀ ಶಿವಜ್ಞಾನಮಣಿ ಸರಸ್ವತಿ ಸಾಧ್ವಿ, ಬಸದಿಗಳ ಮೊಕ್ತೇಸರಾದ ಪಟ್ನಶೆಟ್ಟಿ ಸುಧೀಶ್ ಕುಮಾರ್, ಆನಡ್ಕ ದಿನೇಶ್ ಕುಮಾರ್ ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…