ಮುಲ್ಕಿ: ಭಾರತ ಸರಕಾರ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರಕಾರ, ಜೀವನ ಸಾರ್ಥಕತೆ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ, ಪಡುಪಣಂಬೂರು ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್, ರೋಟರಿ ಕ್ಲಬ್ ಬೈಕಂಪಾಡಿ ಇದರ ಸಹಕಾರದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ ಇವರ ಆಶ್ರಯದಲ್ಲಿ ಅಂಗಾಂಗ ದಾನ ಮಾಡಿ ಅಮೂಲ್ಯ ಜೀವನ ಉಳಿಸಿ ಕಾರ್ಯಕ್ರಮವನ್ನು ಇಂದು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮ ಚಂದ್ರಶೇಖರ್ ರವರು ವಹಿಸಿಕೊಂಡಿದ್ದು ಕಾರ್ಯಕ್ರಮದ ಬಗ್ಗೆ ಅಂಗಾಂಗ ದಾನ ಎಂಬುವುದು ಒಂದು ಜೀವದಾನ ಅದರ ಮಹತ್ವವನ್ನು ಅರಿತು ಪ್ರತಿಯೊಬ್ಬರು ಸ್ವಪ್ರೇರಣೆಯಿಂದ ಅಂಗಾಂಗ ದಾನವನ್ನು ಮಾಡಲು ಮುಂದೆ ಬರಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ವೆನ್ಲಾಕ್ ಆಸ್ಪತ್ರೆಯ ಜೀವ ಸಾರ್ಥಕತೆ, ಅಂಗಾಂಗ ಕಸಿ ಸಂಯೋಜಕಿಯಾದ ಶ್ರೀಮತಿ ಪದ್ಮಾವತಿಯವರು, ಅಂಗಾಂಗ ದಾನದ ವಿಚಾರವಾಗಿ ಸವಿವರವಾಗಿ ವಿವರಿಸುತ್ತಾ ಬಹಳಷ್ಟು ಜನರಿಗೆ ಅಂಗಾಂಗಗಳ ಅವಶ್ಯಕತೆ ಇರುವುದರಿಂದ ಈ ಬಗ್ಗೆ ಪ್ರತಿಯೊಬ್ಬರು ಮುಂದೆ ಬಂದು ಅಂಗಾಂಗ ದಾನವನ್ನು ಮಾಡಬೇಕು ಈ ಬಗ್ಗೆ ಯುವ ಸಂಘಟನೆಗಳು ಜನರಲ್ಲಿ ಅರಿವು ಮೂಡಿಸಬೇಕು ಎಂಬುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್ ಇಲ್ಲಿನ ಸುರಕ್ಷಾಧಿಕಾರಿ ಶ್ರೀಮತಿ ಮಾರ್ಗರೇಟ್ ಸುದರ್ಶಿನಿ, ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಕೋಮಲ, ಮತ್ತು ಆಶಾ ಕಾರ್ಯಕರ್ತೆಯರು, ಫೇಮಸ್ ಯೂತ್ ಕ್ಲಬ್ಬಿನ ಕಾರ್ಯದರ್ಶಿ ಹಿಮಕರ್, ಮಹಿಳಾ ಅಧ್ಯಕ್ಷೆ ಪ್ರೇಮಲತಾ ಯೋಗೀಶ್, ಉಪಾಧ್ಯಕ್ಷೆ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿ ಕುಸುಮ ಎಚ್ಕೋ. ಟ್ಯಾನ್, ಕೋಶಾಧಿಕಾರಿ ಇಂದಿರಾ ಸಂಜೀವ ಕರ್ಕೇರ, ವಿಶ್ವಬ್ಯಾಂಕ್ ಕುಡಿಯುವ ನೀರು ಮತ್ತು ಪರಿಸರ ನೈರ್ಮಲ್ಯ ಸಮಿತಿಯ ಅಧ್ಯಕ್ಷರಾದ ದಿನಕರ ಸಾಲ್ಯಾನ್, ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಗೌರವಾಧ್ಯಕ್ಷರಾದ ಶ್ರೀ ಗಣೇಶ್ ಜಿ ಬಂಗೇರ, ರೋಟರಿ ಸಮುದಾಯದಳದ ಅಧ್ಯಕ್ಷರಾದ ಮೋಹನ್ ದಾಸ್ ದೇವಾಡಿಗ,
ಕಾರ್ಯಕ್ರಮದಲ್ಲಿ ಸಂಸ್ಥೆಯ ಮಹಿಳಾ ಅಧ್ಯಕ್ಷರಾದ ಪ್ರೇಮಲತಾ ಯೋಗೀಶ್ ರವರು ಪ್ರಸ್ತಾವನೆಗೈದು ಸ್ವಾಗತವನ್ನು ನಿರ್ವಹಿಸಿದ್ದರು, ಮಹಮ್ಮದ್ ಶರೀಫ್ ರವರು ಧನ್ಯವಾದವನ್ನು ಅರ್ಪಿಸಿದರು, ಸಂಸ್ಥೆಯ ಕಾರ್ಯದರ್ಶಿ ಹಿಮಕರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…