ಮುಲ್ಕಿ: ಭಾರತ ಸರಕಾರ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರಕಾರ, ಜೀವನ ಸಾರ್ಥಕತೆ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ, ಪಡುಪಣಂಬೂರು ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್, ರೋಟರಿ ಕ್ಲಬ್ ಬೈಕಂಪಾಡಿ ಇದರ ಸಹಕಾರದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ ಇವರ ಆಶ್ರಯದಲ್ಲಿ ಅಂಗಾಂಗ ದಾನ ಮಾಡಿ ಅಮೂಲ್ಯ ಜೀವನ ಉಳಿಸಿ ಕಾರ್ಯಕ್ರಮವನ್ನು ಇಂದು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮ ಚಂದ್ರಶೇಖರ್ ರವರು ವಹಿಸಿಕೊಂಡಿದ್ದು ಕಾರ್ಯಕ್ರಮದ ಬಗ್ಗೆ ಅಂಗಾಂಗ ದಾನ ಎಂಬುವುದು ಒಂದು ಜೀವದಾನ ಅದರ ಮಹತ್ವವನ್ನು ಅರಿತು ಪ್ರತಿಯೊಬ್ಬರು ಸ್ವಪ್ರೇರಣೆಯಿಂದ ಅಂಗಾಂಗ ದಾನವನ್ನು ಮಾಡಲು ಮುಂದೆ ಬರಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ವೆನ್ಲಾಕ್ ಆಸ್ಪತ್ರೆಯ ಜೀವ ಸಾರ್ಥಕತೆ, ಅಂಗಾಂಗ ಕಸಿ ಸಂಯೋಜಕಿಯಾದ ಶ್ರೀಮತಿ ಪದ್ಮಾವತಿಯವರು, ಅಂಗಾಂಗ ದಾನದ ವಿಚಾರವಾಗಿ ಸವಿವರವಾಗಿ ವಿವರಿಸುತ್ತಾ ಬಹಳಷ್ಟು ಜನರಿಗೆ ಅಂಗಾಂಗಗಳ ಅವಶ್ಯಕತೆ ಇರುವುದರಿಂದ ಈ ಬಗ್ಗೆ ಪ್ರತಿಯೊಬ್ಬರು ಮುಂದೆ ಬಂದು ಅಂಗಾಂಗ ದಾನವನ್ನು ಮಾಡಬೇಕು ಈ ಬಗ್ಗೆ ಯುವ ಸಂಘಟನೆಗಳು ಜನರಲ್ಲಿ ಅರಿವು ಮೂಡಿಸಬೇಕು ಎಂಬುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್ ಇಲ್ಲಿನ ಸುರಕ್ಷಾಧಿಕಾರಿ ಶ್ರೀಮತಿ ಮಾರ್ಗರೇಟ್ ಸುದರ್ಶಿನಿ, ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಕೋಮಲ, ಮತ್ತು ಆಶಾ ಕಾರ್ಯಕರ್ತೆಯರು, ಫೇಮಸ್ ಯೂತ್ ಕ್ಲಬ್ಬಿನ ಕಾರ್ಯದರ್ಶಿ ಹಿಮಕರ್, ಮಹಿಳಾ ಅಧ್ಯಕ್ಷೆ ಪ್ರೇಮಲತಾ ಯೋಗೀಶ್, ಉಪಾಧ್ಯಕ್ಷೆ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿ ಕುಸುಮ ಎಚ್ಕೋ. ಟ್ಯಾನ್, ಕೋಶಾಧಿಕಾರಿ ಇಂದಿರಾ ಸಂಜೀವ ಕರ್ಕೇರ, ವಿಶ್ವಬ್ಯಾಂಕ್ ಕುಡಿಯುವ ನೀರು ಮತ್ತು ಪರಿಸರ ನೈರ್ಮಲ್ಯ ಸಮಿತಿಯ ಅಧ್ಯಕ್ಷರಾದ ದಿನಕರ ಸಾಲ್ಯಾನ್, ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಗೌರವಾಧ್ಯಕ್ಷರಾದ ಶ್ರೀ ಗಣೇಶ್ ಜಿ ಬಂಗೇರ, ರೋಟರಿ ಸಮುದಾಯದಳದ ಅಧ್ಯಕ್ಷರಾದ ಮೋಹನ್ ದಾಸ್ ದೇವಾಡಿಗ,
ಕಾರ್ಯಕ್ರಮದಲ್ಲಿ ಸಂಸ್ಥೆಯ ಮಹಿಳಾ ಅಧ್ಯಕ್ಷರಾದ ಪ್ರೇಮಲತಾ ಯೋಗೀಶ್ ರವರು ಪ್ರಸ್ತಾವನೆಗೈದು ಸ್ವಾಗತವನ್ನು ನಿರ್ವಹಿಸಿದ್ದರು, ಮಹಮ್ಮದ್ ಶರೀಫ್ ರವರು ಧನ್ಯವಾದವನ್ನು ಅರ್ಪಿಸಿದರು, ಸಂಸ್ಥೆಯ ಕಾರ್ಯದರ್ಶಿ ಹಿಮಕರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…