ಬಂಟ್ವಾಳ: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು ಮಂಜನಾಡಿ ಗ್ರಾಮದ ನಾಟೆಕಲ್ ನಿವಾಸಿ ಅಶ್ರಫ್ ಬಂಧಿತ ಆರೋಪಿ.
2015 ರಲ್ಲಿ ಗಾಂಜಾ ಮಾರಾಟ ಮಾಡಿದ್ದ ಆರೋಪದ ಮೇಲೆ ಬಂಧನವಾಗಿ , ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿ ಅಶ್ರಫ್ ಅ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಇದೀಗ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ ನೇತ್ರತ್ವದ ಎಸ್.ಐ.ಹರೀಶ್, ಮತ್ತು ಮೂರ್ತಿ ಎಂ.ಅರ್.ಅವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ಯೋಗೇಶ್, ವಿಜಯಕುಮಾರ್ ಅವರು ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಳಿಕ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…