ಸಾಮಾನ್ಯವಾಗಿ ಮನುಷ್ಯನಿಗೆ ಬರುವ ಹೃದಯ ಸಂಬಂಧಿ ಕಾಯಿಲೆಗಳಲ್ಲಿ ಮೂರು ವಿಧಗಳು. ಹೃದಯಾಘಾತ, ಹೃದಯ ವೈಫಲ್ಯ ಹಾಗೂ ಹೃದಯ ಸ್ಥಂಭನ.
ಇವುಗಳಿಗೆ ನಾನಾ ಕಾರಣಗಳಿವೆ. ಆದರೆ ನಾವು ದಿನ ನಿತ್ಯ ಸೇವಿಸುವ ಆಹಾರ ಪದ್ಧತಿಯೇ ಅತೀ ಮುಖ್ಯವಾಗಿದೆ. ಅದಕ್ಕಾಗಿ ಪ್ರತಿ ದಿನ ನಡಿಗೆ, ಲಘು ವ್ಯಾಯಾಮ ಹಾಗೂ ಆಹಾರದಲ್ಲಿ ಪಥ್ಯವನ್ನು ಹೊಂದುವುದು ಉತ್ತಮ ವಿಧಾನವಾಗಿದೆ. ಇತ್ತೀಚಿನ ದಿನಗಳಲ್ಲಿ ಯುವ ಜನತೆಯೇ ಹೆಚ್ಚಾಗಿ ಹೃದಯ ಸಂಬಂಧೀ ಕಾಯಿಲೆಗಳಿಂದ ಸಾವನ್ನಪುವುದು ಅತ್ಯಂತ ಖೇದಕರ ಸಂಗಾತಿಯಾಗಿದೆ.
ಇವುಗಳಿಗೆ ಮುನ್ನೆಚ್ಚರಿಕೆಯೇ ಪರಿಹಾರ” ಎಂದು ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಲಾದ ಸಮಾರಂಭದಲ್ಲಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಖ್ಯಾತ ಹೃದಯ ತಜ್ಞರಾದ ಡಾ. ದಿತೇಶ್ ಎಂ. ತಿಳಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸವಿವರವಾದ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ರವರು, ವಿದ್ಯಾರ್ಥಿ ಜೀವನದಿಂದಲೇ ಆರೋಗ್ಯದಲ್ಲಿ ಶಿಸ್ತು ಕಾಪಾಡಿಕೊಳ್ಳಬೇಕು ಹಾಗೂ ತನ್ನ ಪರಿಸರದ ಜನರಲ್ಲಿ ಹೃದಯ ಸಂಬಂಧೀ ಕಾಯಿಲೆಗಳ ಕುರಿತಾಗಿ ಜಾಗೃತಿ ಮೂಡಿಸಬೇಕು ಎಂದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…