ಸಾಮಾನ್ಯವಾಗಿ ಮನುಷ್ಯನಿಗೆ ಬರುವ ಹೃದಯ ಸಂಬಂಧಿ ಕಾಯಿಲೆಗಳಲ್ಲಿ ಮೂರು ವಿಧಗಳು. ಹೃದಯಾಘಾತ, ಹೃದಯ ವೈಫಲ್ಯ ಹಾಗೂ ಹೃದಯ ಸ್ಥಂಭನ.
ಇವುಗಳಿಗೆ ನಾನಾ ಕಾರಣಗಳಿವೆ. ಆದರೆ ನಾವು ದಿನ ನಿತ್ಯ ಸೇವಿಸುವ ಆಹಾರ ಪದ್ಧತಿಯೇ ಅತೀ ಮುಖ್ಯವಾಗಿದೆ. ಅದಕ್ಕಾಗಿ ಪ್ರತಿ ದಿನ ನಡಿಗೆ, ಲಘು ವ್ಯಾಯಾಮ ಹಾಗೂ ಆಹಾರದಲ್ಲಿ ಪಥ್ಯವನ್ನು ಹೊಂದುವುದು ಉತ್ತಮ ವಿಧಾನವಾಗಿದೆ. ಇತ್ತೀಚಿನ ದಿನಗಳಲ್ಲಿ ಯುವ ಜನತೆಯೇ ಹೆಚ್ಚಾಗಿ ಹೃದಯ ಸಂಬಂಧೀ ಕಾಯಿಲೆಗಳಿಂದ ಸಾವನ್ನಪುವುದು ಅತ್ಯಂತ ಖೇದಕರ ಸಂಗಾತಿಯಾಗಿದೆ.
ಇವುಗಳಿಗೆ ಮುನ್ನೆಚ್ಚರಿಕೆಯೇ ಪರಿಹಾರ” ಎಂದು ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಲಾದ ಸಮಾರಂಭದಲ್ಲಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಖ್ಯಾತ ಹೃದಯ ತಜ್ಞರಾದ ಡಾ. ದಿತೇಶ್ ಎಂ. ತಿಳಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸವಿವರವಾದ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ರವರು, ವಿದ್ಯಾರ್ಥಿ ಜೀವನದಿಂದಲೇ ಆರೋಗ್ಯದಲ್ಲಿ ಶಿಸ್ತು ಕಾಪಾಡಿಕೊಳ್ಳಬೇಕು ಹಾಗೂ ತನ್ನ ಪರಿಸರದ ಜನರಲ್ಲಿ ಹೃದಯ ಸಂಬಂಧೀ ಕಾಯಿಲೆಗಳ ಕುರಿತಾಗಿ ಜಾಗೃತಿ ಮೂಡಿಸಬೇಕು ಎಂದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…