ಒಂದೆರಡು ವರ್ಷಗಳಿಂದ ಪುತ್ತೂರು ಮತ್ತು ಆಸುಪಾಸಿನ ನಾನಾ ಕಡೆ ಚಿರತೆ ಓಡಾಟದ ಹೆಜ್ಜೆಗುರುತುಗಳು ಗೋಚರವಾದ ನಡುವೆಯೇ, ಇದೇ ಮೊದಲ ಬಾರಿಗೆ ಚಿರತೆಯು ತನ್ನ ಬೇಟೆಯನ್ನು ಮರದ ಮೇಲಿಟ್ಟು ನಾಪತ್ತೆಯಾದ ಘಟನೆ ನಡೆದಿದೆ.
ಪುತ್ತೂರು ತಾಲೂಕಿನ ಕೆಯ್ಯೂರು ಮತ್ತು ಕೊಳ್ತಿಗೆ ಗ್ರಾಮ ವ್ಯಾಪ್ತಿಯ ಕಣಿಯಾರುಮಲೆ ರಕ್ಷಿತಾರಣ್ಯದ ಅರ್ತಿಯಡ್ಕ ಎಂಬಲ್ಲಿ ರಬ್ಬರ್ ಮರವೊಂದರ ಕೊಂಬೆಯಲ್ಲಿ ಸತ್ತ ದನದ ಕರುವಿನ ಕಳೇಬರ ನೇತಾಡುತ್ತಿರುವುದು ಪತ್ತೆಯಾಗಿದ್ದು, ಇದು ಚಿರತೆಯದ್ದೇ ಕೆಲಸ ಎಂದು ಅರಣ್ಯ ಇಲಾಖೆ ಖಚಿತಪಡಿಸಿರುವ ಕಾರಣ ಹಳ್ಳಿಯ ಗ್ರಾಮಸ್ಥರು ಮತ್ತು ರಬ್ಬರ್ ಟ್ಯಾಪರ್ಗಳಲ್ಲಿ ಆತಂಕ ಮನೆ ಮಾಡಿದೆ. ಮುಂಜಾನೆ ರಬ್ಬರ್ ಟ್ಯಾಪಿಂಗ್ಗೆ ಹೋದ ಕಾರ್ಮಿಕರು ತೋಟದ ಮಧ್ಯದ ರಬ್ಬರ್ ಮರವೊಂದರ ಮೇಲೆ ಸತ್ತ ದನದ ಕರು ನೇತಾಡು ತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.
ಕರುವಿನ ರುಂಡವು ಮರದ ಕೊಂಬೆಯ ಮಧ್ಯೆ ಸಿಲುಕಿದ್ದು, ಕೆಳಗೆ ಬೀಳದಂತೆ ಆಧಾರವಾಗಿತ್ತು. ಸತ್ತ ಕರುವಿನ ದೇಹದ ಒಂದಷ್ಟು ಭಾಗವನ್ನು ಸೀಳಿ ಮಾಂಸ ಹೊರ ತೆಗೆದು ಚಿರತೆ ತಿಂದಿದೆ. ಉಳಿದ
ಕೊಂಬೆಯಲ್ಲಿ ನೇತು ಹಾಕಿ ಪರಾರಿಯಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…