ಒಂದೆರಡು ವರ್ಷಗಳಿಂದ ಪುತ್ತೂರು ಮತ್ತು ಆಸುಪಾಸಿನ ನಾನಾ ಕಡೆ ಚಿರತೆ ಓಡಾಟದ ಹೆಜ್ಜೆಗುರುತುಗಳು ಗೋಚರವಾದ ನಡುವೆಯೇ, ಇದೇ ಮೊದಲ ಬಾರಿಗೆ ಚಿರತೆಯು ತನ್ನ ಬೇಟೆಯನ್ನು ಮರದ ಮೇಲಿಟ್ಟು ನಾಪತ್ತೆಯಾದ ಘಟನೆ ನಡೆದಿದೆ.
ಪುತ್ತೂರು ತಾಲೂಕಿನ ಕೆಯ್ಯೂರು ಮತ್ತು ಕೊಳ್ತಿಗೆ ಗ್ರಾಮ ವ್ಯಾಪ್ತಿಯ ಕಣಿಯಾರುಮಲೆ ರಕ್ಷಿತಾರಣ್ಯದ ಅರ್ತಿಯಡ್ಕ ಎಂಬಲ್ಲಿ ರಬ್ಬರ್ ಮರವೊಂದರ ಕೊಂಬೆಯಲ್ಲಿ ಸತ್ತ ದನದ ಕರುವಿನ ಕಳೇಬರ ನೇತಾಡುತ್ತಿರುವುದು ಪತ್ತೆಯಾಗಿದ್ದು, ಇದು ಚಿರತೆಯದ್ದೇ ಕೆಲಸ ಎಂದು ಅರಣ್ಯ ಇಲಾಖೆ ಖಚಿತಪಡಿಸಿರುವ ಕಾರಣ ಹಳ್ಳಿಯ ಗ್ರಾಮಸ್ಥರು ಮತ್ತು ರಬ್ಬರ್ ಟ್ಯಾಪರ್ಗಳಲ್ಲಿ ಆತಂಕ ಮನೆ ಮಾಡಿದೆ. ಮುಂಜಾನೆ ರಬ್ಬರ್ ಟ್ಯಾಪಿಂಗ್ಗೆ ಹೋದ ಕಾರ್ಮಿಕರು ತೋಟದ ಮಧ್ಯದ ರಬ್ಬರ್ ಮರವೊಂದರ ಮೇಲೆ ಸತ್ತ ದನದ ಕರು ನೇತಾಡು ತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.
ಕರುವಿನ ರುಂಡವು ಮರದ ಕೊಂಬೆಯ ಮಧ್ಯೆ ಸಿಲುಕಿದ್ದು, ಕೆಳಗೆ ಬೀಳದಂತೆ ಆಧಾರವಾಗಿತ್ತು. ಸತ್ತ ಕರುವಿನ ದೇಹದ ಒಂದಷ್ಟು ಭಾಗವನ್ನು ಸೀಳಿ ಮಾಂಸ ಹೊರ ತೆಗೆದು ಚಿರತೆ ತಿಂದಿದೆ. ಉಳಿದ
ಕೊಂಬೆಯಲ್ಲಿ ನೇತು ಹಾಕಿ ಪರಾರಿಯಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…