ಒಂದೆರಡು ವರ್ಷಗಳಿಂದ ಪುತ್ತೂರು ಮತ್ತು ಆಸುಪಾಸಿನ ನಾನಾ ಕಡೆ ಚಿರತೆ ಓಡಾಟದ ಹೆಜ್ಜೆಗುರುತುಗಳು ಗೋಚರವಾದ ನಡುವೆಯೇ, ಇದೇ ಮೊದಲ ಬಾರಿಗೆ ಚಿರತೆಯು ತನ್ನ ಬೇಟೆಯನ್ನು ಮರದ ಮೇಲಿಟ್ಟು ನಾಪತ್ತೆಯಾದ ಘಟನೆ ನಡೆದಿದೆ.
ಪುತ್ತೂರು ತಾಲೂಕಿನ ಕೆಯ್ಯೂರು ಮತ್ತು ಕೊಳ್ತಿಗೆ ಗ್ರಾಮ ವ್ಯಾಪ್ತಿಯ ಕಣಿಯಾರುಮಲೆ ರಕ್ಷಿತಾರಣ್ಯದ ಅರ್ತಿಯಡ್ಕ ಎಂಬಲ್ಲಿ ರಬ್ಬರ್ ಮರವೊಂದರ ಕೊಂಬೆಯಲ್ಲಿ ಸತ್ತ ದನದ ಕರುವಿನ ಕಳೇಬರ ನೇತಾಡುತ್ತಿರುವುದು ಪತ್ತೆಯಾಗಿದ್ದು, ಇದು ಚಿರತೆಯದ್ದೇ ಕೆಲಸ ಎಂದು ಅರಣ್ಯ ಇಲಾಖೆ ಖಚಿತಪಡಿಸಿರುವ ಕಾರಣ ಹಳ್ಳಿಯ ಗ್ರಾಮಸ್ಥರು ಮತ್ತು ರಬ್ಬರ್ ಟ್ಯಾಪರ್ಗಳಲ್ಲಿ ಆತಂಕ ಮನೆ ಮಾಡಿದೆ. ಮುಂಜಾನೆ ರಬ್ಬರ್ ಟ್ಯಾಪಿಂಗ್ಗೆ ಹೋದ ಕಾರ್ಮಿಕರು ತೋಟದ ಮಧ್ಯದ ರಬ್ಬರ್ ಮರವೊಂದರ ಮೇಲೆ ಸತ್ತ ದನದ ಕರು ನೇತಾಡು ತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.
ಕರುವಿನ ರುಂಡವು ಮರದ ಕೊಂಬೆಯ ಮಧ್ಯೆ ಸಿಲುಕಿದ್ದು, ಕೆಳಗೆ ಬೀಳದಂತೆ ಆಧಾರವಾಗಿತ್ತು. ಸತ್ತ ಕರುವಿನ ದೇಹದ ಒಂದಷ್ಟು ಭಾಗವನ್ನು ಸೀಳಿ ಮಾಂಸ ಹೊರ ತೆಗೆದು ಚಿರತೆ ತಿಂದಿದೆ. ಉಳಿದ
ಕೊಂಬೆಯಲ್ಲಿ ನೇತು ಹಾಕಿ ಪರಾರಿಯಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…