ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ.ನಗದು ಕಳವಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ನರಿಕೊಂಬು ನಿವಾಸಿ ಪ್ರಕಾಶ್ ಕೋಡಿಮಜಲು ಎಂಬವರ ರೂ.1 ಲಕ್ಷ ಹಣ ಕಳವಾಗಿದೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅವರು ಶುಕ್ರವಾರ ಬೆಳಿಗ್ಗೆ ರೂ.1.40 ಲಕ್ಷ ಹಣವನ್ನು ಬ್ಯಾಂಕಿನಿಂದ ಡ್ರಾ ಮಾಡಿ ಬಳಿಕ ಬಿಸಿರೋಡಿನ ಮಿನಿವಿಧಾನ ಸೌಧದ ಕಚೇರಿಯ ಮುಂಭಾಗದಲ್ಲಿ ಇರಿಸಲಾಗಿದ್ದ, ದ್ವಿಚಕ್ರವಾಹನದ ಸೀಟಿನಡಿ ಇರುವ ಬಾಕ್ಸ್ ನಲ್ಲಿ ಇರಿಸಿದ್ದರು.ಬಳಿಕ ಬೇರೆಬೇರೆ ಕೆಲಸ ನಿಮಿತ್ತ ಅಲ್ಲಿಂದ ತೆರಳಿದ್ದರು.
ಮಧ್ಯಾಹ್ನ ಬಳಿಕ ಬಂದು ಸೀಟು ಲಾಕ್ ತೆರೆದಾಗ ಅದರೊಳಗೆ ಇರಿಸಲಾಗಿದ್ದ 1.40 ಲಕ್ಷದಲ್ಲಿ 40 ಸಾವಿರ ಮಾತ್ರ ಇದ್ದು ಉಳಿದ 1ಲಕ್ಷ ಹಣ ಕಳವಾಗಿದೆ ಎಂದು ತಿಳಿಸಿದ್ದಾರೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…