ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ.ನಗದು ಕಳವಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ನರಿಕೊಂಬು ನಿವಾಸಿ ಪ್ರಕಾಶ್ ಕೋಡಿಮಜಲು ಎಂಬವರ ರೂ.1 ಲಕ್ಷ ಹಣ ಕಳವಾಗಿದೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅವರು ಶುಕ್ರವಾರ ಬೆಳಿಗ್ಗೆ ರೂ.1.40 ಲಕ್ಷ ಹಣವನ್ನು ಬ್ಯಾಂಕಿನಿಂದ ಡ್ರಾ ಮಾಡಿ ಬಳಿಕ ಬಿಸಿರೋಡಿನ ಮಿನಿವಿಧಾನ ಸೌಧದ ಕಚೇರಿಯ ಮುಂಭಾಗದಲ್ಲಿ ಇರಿಸಲಾಗಿದ್ದ, ದ್ವಿಚಕ್ರವಾಹನದ ಸೀಟಿನಡಿ ಇರುವ ಬಾಕ್ಸ್ ನಲ್ಲಿ ಇರಿಸಿದ್ದರು.ಬಳಿಕ ಬೇರೆಬೇರೆ ಕೆಲಸ ನಿಮಿತ್ತ ಅಲ್ಲಿಂದ ತೆರಳಿದ್ದರು.
ಮಧ್ಯಾಹ್ನ ಬಳಿಕ ಬಂದು ಸೀಟು ಲಾಕ್ ತೆರೆದಾಗ ಅದರೊಳಗೆ ಇರಿಸಲಾಗಿದ್ದ 1.40 ಲಕ್ಷದಲ್ಲಿ 40 ಸಾವಿರ ಮಾತ್ರ ಇದ್ದು ಉಳಿದ 1ಲಕ್ಷ ಹಣ ಕಳವಾಗಿದೆ ಎಂದು ತಿಳಿಸಿದ್ದಾರೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…