ಬಂಟ್ವಾಳ: ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು 73 ರ ರಾಜ್ಯ ಹೆದ್ದಾರಿಯ ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ.
ಘಟನೆಯಲ್ಲಿ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ.
ಮಂಗಳೂರಿನಿಂದ ಬೆಳ್ತಂಗಡಿಗೆ ಅಕ್ಕಿ ಸಾಗಾಟದ ಲಾರಿಯಾಗಿದ್ದು, ಬಡಗುಂಡಿ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆ ನಡೆದ ಕೂಡಲೇ ಚಾಲಕನನ್ನು ಲಾರಿಯ ಗಾಜು ಪುಡಿ ಮಾಡಿ ಹೊರಕ್ಕೆ ತರಲಾಗಿದೆ.
ಲಾರಿ ಪಲ್ಟಿಯಾಗುವ ವೇಳೆ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ, ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ. ಅಲ್ಲೇ ಸಮೀಪದಲ್ಲಿ ಹೈ ಟೆನ್ಸನ್ ವಿದ್ಯುತ್ ವಯರ್ ಗಳಿದ್ದು,ಸ್ವಲ್ಪದರಲ್ಲೇ ದೊಡ್ಡ ಅನಾಹುತ ತಪ್ಪಿದೆ. ಘಟನೆಯ ವೇಳೆ ವಿದ್ಯುತ್ ತಂತಿಗೆ ತಾಗಿದ್ದರೆ,ಅನೇಕ ಜೀವಹಾನಿಯಾಗುವ ಬೀಕರ ದುರಂತಕ್ಕೆ ಕಾರಣವಾಗುತ್ತಿತ್ತು ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…