ಬಂಟ್ವಾಳ: ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು 73 ರ ರಾಜ್ಯ ಹೆದ್ದಾರಿಯ ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ.
ಘಟನೆಯಲ್ಲಿ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ.
ಮಂಗಳೂರಿನಿಂದ ಬೆಳ್ತಂಗಡಿಗೆ ಅಕ್ಕಿ ಸಾಗಾಟದ ಲಾರಿಯಾಗಿದ್ದು, ಬಡಗುಂಡಿ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆ ನಡೆದ ಕೂಡಲೇ ಚಾಲಕನನ್ನು ಲಾರಿಯ ಗಾಜು ಪುಡಿ ಮಾಡಿ ಹೊರಕ್ಕೆ ತರಲಾಗಿದೆ.
ಲಾರಿ ಪಲ್ಟಿಯಾಗುವ ವೇಳೆ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ, ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ. ಅಲ್ಲೇ ಸಮೀಪದಲ್ಲಿ ಹೈ ಟೆನ್ಸನ್ ವಿದ್ಯುತ್ ವಯರ್ ಗಳಿದ್ದು,ಸ್ವಲ್ಪದರಲ್ಲೇ ದೊಡ್ಡ ಅನಾಹುತ ತಪ್ಪಿದೆ. ಘಟನೆಯ ವೇಳೆ ವಿದ್ಯುತ್ ತಂತಿಗೆ ತಾಗಿದ್ದರೆ,ಅನೇಕ ಜೀವಹಾನಿಯಾಗುವ ಬೀಕರ ದುರಂತಕ್ಕೆ ಕಾರಣವಾಗುತ್ತಿತ್ತು ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…