ಜನ ಮನದ ನಾಡಿ ಮಿಡಿತ

Advertisement

ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಮಂಗಳೂರು ವತಿಯಿಂದ ಆಯೋಜಿಸಲಾದ “ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ” ಬಿಡುಗಡೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಅಕ್ಟೋಬರ್ 28 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ದಿನಪೂರ್ತಿ ಜರಗಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ಅಕ್ಟೋಬರ್ 29ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಬಂಟರ ಸಂಘ ಮುಂಬೈಯಲ್ಲಿ ಬಂಟರ ಸಂಘ ಮುಂಬೈಯ ಅಧ್ಯಕ್ಷರಾದ ಶ್ರೀ ಚಂದ್ರಹಾಸ್ ಶೆಟ್ಟಿ, ಒಕ್ಕೂಟದ ಮಹಾ ದಾನಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಮತ್ತು ಒಕ್ಕೂಟದ ಮಹಾ ನಿರ್ದೇಶಕರಾದ ಶ್ರೀ ಕೆ. ಪ್ರಕಾಶ್ ಶೆಟ್ಟಿಯವರಿಂದ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಶ್ರೀ ಉಳ್ತುರು ಮೋಹನದಾಸ್ ಶೆಟ್ಟಿ, ನಿರ್ದೇಶಕರಾದ ಶ್ರೀ ಕೆ. ಎಮ್. ಶೆಟ್ಟಿ ಮತ್ತು ಡಾ. ಆರ್. ಕೆ. ಶೆಟ್ಟಿ, ಪೋಷಕ ಸದಸ್ಯರಾದ ಶ್ರೀ ಪದ್ಮನಾಭ ಪಯ್ಯಡೆ, ಶಾಂತರಾಮ್ ಬಿ. ಶೆಟ್ಟಿ, ಪೋಷಕರು ಹಾಗೂ ಕ್ರೀಡಾ ಸಮಿತಿಯ ಸಂಚಾಲಕರಾದ ಶ್ರೀ ಗಿರೀಶ್ ಶೆಟ್ಟಿ ತೆಳ್ಳರ್, ಶ್ರೀ ಬಿ. ಆರ್. ಶೆಟ್ಟಿ, ಸಿ. ಎ. ಐ. ಆರ್. ಶೆಟ್ಟಿ, ಶ್ರೀ ನಿತ್ಯಾನಂದ ಹೆಗ್ಡೆ ಮತ್ತು ಸಿ. ಎ. ಹರೀಶ್ ಶೆಟ್ಟಿ ಇವರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!