ಜನ ಮನದ ನಾಡಿ ಮಿಡಿತ

Advertisement

ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಮಂಗಳೂರು ವತಿಯಿಂದ ಆಯೋಜಿಸಲಾದ “ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ” ಬಿಡುಗಡೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಅಕ್ಟೋಬರ್ 28 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ದಿನಪೂರ್ತಿ ಜರಗಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ಅಕ್ಟೋಬರ್ 29ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಬಂಟರ ಸಂಘ ಮುಂಬೈಯಲ್ಲಿ ಬಂಟರ ಸಂಘ ಮುಂಬೈಯ ಅಧ್ಯಕ್ಷರಾದ ಶ್ರೀ ಚಂದ್ರಹಾಸ್ ಶೆಟ್ಟಿ, ಒಕ್ಕೂಟದ ಮಹಾ ದಾನಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಮತ್ತು ಒಕ್ಕೂಟದ ಮಹಾ ನಿರ್ದೇಶಕರಾದ ಶ್ರೀ ಕೆ. ಪ್ರಕಾಶ್ ಶೆಟ್ಟಿಯವರಿಂದ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಶ್ರೀ ಉಳ್ತುರು ಮೋಹನದಾಸ್ ಶೆಟ್ಟಿ, ನಿರ್ದೇಶಕರಾದ ಶ್ರೀ ಕೆ. ಎಮ್. ಶೆಟ್ಟಿ ಮತ್ತು ಡಾ. ಆರ್. ಕೆ. ಶೆಟ್ಟಿ, ಪೋಷಕ ಸದಸ್ಯರಾದ ಶ್ರೀ ಪದ್ಮನಾಭ ಪಯ್ಯಡೆ, ಶಾಂತರಾಮ್ ಬಿ. ಶೆಟ್ಟಿ, ಪೋಷಕರು ಹಾಗೂ ಕ್ರೀಡಾ ಸಮಿತಿಯ ಸಂಚಾಲಕರಾದ ಶ್ರೀ ಗಿರೀಶ್ ಶೆಟ್ಟಿ ತೆಳ್ಳರ್, ಶ್ರೀ ಬಿ. ಆರ್. ಶೆಟ್ಟಿ, ಸಿ. ಎ. ಐ. ಆರ್. ಶೆಟ್ಟಿ, ಶ್ರೀ ನಿತ್ಯಾನಂದ ಹೆಗ್ಡೆ ಮತ್ತು ಸಿ. ಎ. ಹರೀಶ್ ಶೆಟ್ಟಿ ಇವರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!