ಮುಲ್ಕಿ: ಪುನರೂರು ಸಮೀಪದ ಎಸ್.ಕೋಡಿ ಗುಡ್ಡೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಗೆ ಶರಣಾಗಿದ್ದಾನೆ.
ಮೃತ ವ್ಯಕ್ತಿಯನ್ನು ಮಂಗಳೂರು ಕುಂಪಲ ನಿವಾಸಿ ರಾಮ ಪೂಜಾರಿ (50) ಗುರುತಿಸಲಾಗಿದೆ.
ಮೃತ ರಾಮ ಪೂಜಾರಿ ತಮ್ಮ ಸಂಬಂಧಿಕರ ಮನೆಯಾದ ಕಿನ್ನಿಗೋಳಿ ಸಮೀಪದ ಎಸ್. ಕೋಡಿಗೆ ಬಂದಿದ್ದು ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.
ಮೃತರು ಮಾನಸಿಕವಾಗಿ ನೊಂದಿದ್ದು ಭಾನುವಾರ ಮಧ್ಯಾಹ್ನ ತಮ್ಮ ಸಂಬಂಧಿಕರ ಮನೆಯ ಸಮೀಪದ ಗುಡ್ಡೆಯಲ್ಲಿ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ನಾಪತ್ತೆಯಾಗಿರುವುದನ್ನು ಕಂಡು ಮನೆಯವರು ಹುಡುಕಾಟ ನಡೆಸಿದಾಗ ಮೂರು ಗಂಟೆ ಸುಮಾರಿಗೆ ಗುಡ್ಡೆಯಲ್ಲಿ ನೇಣು ಬಿಗಿದ ರೀತಿಯಲ್ಲಿ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…