ದಕ್ಷಿಣ ಕನ್ನಡ : ಐತಿಹಾಸಿಕ 34 ನೇ ವರ್ಷದ ಮಂಗಳೂರು ದಸರಾ ಅಕ್ಟೋಬರ್ 15ರಿಂದ ಶ್ರೀ ಕ್ಷೇತ್ರ ಕುದ್ರೊಳಿಯಲ್ಲಿ ಪ್ರಾರಂಭವಾಗುತ್ತಿದ್ದು ಸಿದ್ದತೆಗಳು ಭರದಿಂದ ಸಾಗಿವೆ. ಈ ಬಾರಿಯ ದಸರಾ ಸಿದ್ದತೆಗಳ ಬಗ್ಗೆ ದೇವಳದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ಮಾಹಿತಿ ನೀಡಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿ ಮಹೋತ್ಸವ ಕಳೆದ 33 ವರ್ಷಗಳಿಂದ ವರ್ಷಂಪ್ರತಿ ಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ಬಾರಿಯೂ ವಿಶ್ವವಿಖ್ಯಾತ “ಮಂಗಳೂರು ದಸರಾ” ಬಿ. ಜನಾರ್ಧನ ಪೂಜಾರಿಯವರ ಮಾರ್ಗದರ್ಶನದಲ್ಲಿ ಇದೇ ತಿಂಗಳ ಅ.15ರಂದು ಶ್ರೀ ಗಣೇಶ, ನವದುರ್ಗೆ ಮತ್ತು ಶ್ರೀ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠಾಪನೆಗೊಳಿಸಿ ಪ್ರಾರಂಭವಾಗಲಿದೆ” ಎಂದರು.
ಬಳಿಕ ಮಾತಾಡಿದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು, “ದಸರಾ ಮಹೋತ್ಸವವು ಅ.25ರವರೆಗೆ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದ್ದು,ಅ. 24ರಂದು 4 ಗಂಟೆಗೆ ಸರಿಯಾಗಿ “ಮಂಗಳೂರು ದಸರಾ” ಮೆರವಣಿಗೆ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ರಾಜರಸ್ತೆಯಲ್ಲಿ ಸಾಗಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ.
ಮಂಗಳೂರು ದಸರಾ ಮೆರವಣಿಗೆಯಲ್ಲಿ ಜಿಲ್ಲೆ ಹಾಗೂ ರಾಜ್ಯದ ಹಲವಾರು ಕಡೆಗಳಿಂದ ಬರುವ ಭಾರತೀಯ ಸನಾತನ ಧರ್ಮದ, ಇತಿಹಾಸ ಭಾವದ ನೆನಪುಗಳನ್ನು ಸ್ಮರಿಸುವ ವಿಶೇಷ ಟ್ಯಾಬ್ ಗಳು ಭಾಗವಹಿಸಲಿದ್ದು ಈ ಸುಂದರ ಮೆರವಣಿಗೆ ವಿಶೇಷ ಮೆರುಗು ನೀಡಲಿದೆ. ಸಾಂಸ್ಕೃತಿಕ ಮೆರವಣಿಗೆ ಸಾಗುವ ರಸ್ತೆಯ ಎರಡೂ ಬದಿಗಳಲ್ಲಿರುವ ಎಲ್ಲಾ ಕಟ್ಟಡದ ಮಾಲಕರು ತಮ್ಮ ತಮ್ಮ ಕಟ್ಟಡಗಳನ್ನು ವಿದ್ಯುದ್ದೀಪದಿಂದ ಅಲಂಕರಿಸಿ “ಮಂಗಳೂರು ದಸರಾ” ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…