ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಜಿಲ್ಲಾಡಾಳಿತ, ದ.ಕ ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು ಮತ್ತು ಜಿಲ್ಲಾ ಯುವ ಜನ ಒಕ್ಕೂಟ, ದ.ಕ ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ , ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ)ತೋಕೂರು ಹಳೆಯಂಗಡಿ, ಇದರ ಆಶ್ರಯದಲ್ಲಿ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು , ಆಸ್ಪತ್ರೆ, ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ (ಪರಿಗಣಿಸಲ್ಪಟ್ಟ, ವಿಶ್ವವಿದ್ಯಾನಿಲಯ ದೇರಳಕಟ್ಟೆ) ಇವರ ಸಹಕಾರದೊಂದಿಗೆ, ಬುಧವಾರ ಬೆಳಿಗ್ಗೆ ಘಂಟೆ 9:30 ರಿಂದ “ದಂತ ತಪಾಸಣೆ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ” ಸರಕಾರಿ ಹಿರಿಯ ಪ್ರಾಥಮಿಕ ಹಿಂದೂಸ್ಥಾನಿ ಶಾಲೆ ತೋಕೂರು, ಹಳೆಯಂಗಡಿ ಇಲ್ಲಿ ನಡೆಯಿತು. ಯೆನೆಪೋಯ ದಂತ ಕಾಲೇಜು, ಆಸ್ಪತ್ರೆ ದೇರಳಕಟ್ಟೆ. ಇಲ್ಲಿನ ಉಪನ್ಯಾಸಕರು ಡಾ. ಆತಿಫಾ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಭರತ್ ಕುಮಾರ್ ಅವರು ಶಾಲಾ ವಿಧ್ಯಾರ್ಥಿಗಳಿಗೆ ದಂತ ಚಿಕಿತ್ಸಾ ಬಗ್ಗೆ ಮಾಹಿತಿಯನ್ನು ನೀಡಿದರು.
ವೇದಿಕೆಯಲ್ಲಿ ಸ್ಫೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್, ಪ್ರಾಥಮಿಕ ಆರೋಗ್ಯ ಕೇಂದ್ರ,ಅತ್ತೂರು, ಕೆಮ್ರಾಲ್ ಇಲ್ಲಿನ ಸುರಕ್ಷಾಧಿಕಾರಿ ಶ್ರೀಮತಿ ಮಾರ್ಗರೇಟ್ ಸುದರ್ಶಿನಿ, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವನಿತಾ, ಸ್ಪೋರ್ಟ್ ಕ್ಲಬ್ ನ ಮಹಿಳಾ ಕಾರ್ಯಾಧ್ಯಕ್ಷೆ ಶ್ರೀಮತಿ ಯಶೋಧ ದೇವಾಡಿಗ ಉಪಸ್ಥಿತರಿದ್ದರು ಈ ಅಭಿಯಾನದಲ್ಲಿ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಸಿಲ್ವಿಯಾ ಕುಟಿನ್ನೋ, ಶ್ರೀಮತಿ ಪ್ರೇಮಾ ಶೆಟ್ಟಿಗಾರ್, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮೀನಾಕ್ಷಿ, ಸಹಾಯಕಿ ಶ್ರೀಮತಿ ಸುಜಾತಾ ಕುಲಾಲ್, ಸ್ಫೋರ್ಟ್ಸ್ ಕ್ಲಬ್ ನ ಶ್ರೀ ಸಂಜಯ್ ಕೋಟ್ಯಾನ್ , ಸದಸ್ಯರು, ಸದಸ್ಯೆಯರು, ಯೆನೆಪೋಯ ದಂತ ಕಾಲೇಜು , ಆಸ್ಪತ್ರೆಯ ಸಿಬ್ಬಂದಿ ವರ್ಗ ಹಾಗೂ ಮತ್ತಿತರರು ಪಾಲ್ಗೊಂಡು ಸಹಕರಿಸಿದರು.
ದಂತ ಚಿಕಿತ್ಸಾ ಶಿಬಿರದಲ್ಲಿ ಅಂಗನವಾಡಿ ಕೇಂದ್ರ ಮತ್ತು ಶಾಲಾ ವಿಧ್ಯಾರ್ಥಿಗಳು ಸೇರಿ ಸುಮಾರು 25 ಮಕ್ಕಳು ಇದರ ಪ್ರಯೋಜನವನ್ನು ಪಡೆದುಕೊಂಡರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…