ಕರಾವಳಿ

ದೈನಂದಿನ ಬದುಕಿನಲ್ಲಿ ಆಯುರ್ವೇದದ ಬಳಕೆ ಹೆಚ್ಚಾಗಬೇಕು- ಡಾ. ಶೋಭಾರಾಣಿ

ಭಾರತ ಸರಕಾರ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಪಡುಪಣಂಬೂರು ಗ್ರಾಮ ಪಂಚಾಯತ್, ರೋಟರಿ ಕ್ಲಬ್ ಬೈಕಂಪಾಡಿ ಮತ್ತು ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕೊಲ್ಲೂರು, ಬಳ್ಕುಂಜೆ ಇದರ ಸಹಕಾರದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಳೆಯಂಗಡಿ ಇವರ ಆಶ್ರಯದಲ್ಲಿ ” ಆಯುಷ್ ಚಿಕಿತ್ಸಾ ಪದ್ಧತಿ ಬಗ್ಗೆ ಮಾಹಿತಿ ಹಾಗೂ ಚಿಕಿತ್ಸಾ ಶಿಬಿರ” ಕಾರ್ಯಕ್ರಮವನ್ನು ದಿನಾಂಕ ಇಂದು ಅಪರಾಹ್ನ ಗಂಟೆ 2:30 ಕ್ಕೆ ಫೇಮಸ್ ಯೂತ್ ಕ್ಲಬ್ಬಿನ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.

ಶಿಬಿರದಲ್ಲಿ ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕೊಲ್ಲೂರು ಬಳ್ಕುಂಜೆ ಇಲ್ಲಿನ ವೈದ್ಯಾಧಿಕಾರಿಗಳಾದ ಡಾ. ಶೋಭಾ ರಾಣಿಯವರು ಜ್ಯೋತಿಯನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ದೈನಂದಿನ ಬದುಕಿನಲ್ಲಿ ಆಯುರ್ವೇದದ ಬಳಕೆ ಹೆಚ್ಚಾಗಬೇಕು ಈ ಬಗ್ಗೆ ಜನರಲ್ಲಿ ಅರಿವನ್ನು ಮೂಡಿಸುವ ಕೆಲಸ ಯುವ ಸಂಘಟನೆಗಳಿಂದ ಆಗಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಶಿಬಿರದ ಬಗ್ಗೆ ಮಾಹಿತಿಯನ್ನು ನೀಡಿದರು. ಹಲವಾರು ಸಮಸ್ಯೆಗಳಿಗೆ ಪರಿಹಾರವನ್ನು ಸೂಚಿಸುತ್ತಾ ಅವಶ್ಯಕತೆ ಇರುವವರಿಗೆ ಸೂಕ್ತ ಔಷಧಿಯನ್ನು ವಿತರಿಸಿದರು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಯುರ್ವೇದ ವಿಭಾಗದ ವಿದ್ಯಾರ್ಥಿನಿಯರಾದ ಕುಮಾರಿ ದಿಲೀಮಾ ಹಾಗೂ ಕುಮಾರಿ ಮಂಜೀಮಾ ಉಪಸ್ಥಿತರಿದ್ದರು, ಸಂಜೀವಿನಿ ಒಕ್ಕೂಟದ ತಾಲೂಕು ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಗೀತಾ ತಲಪಾಡಿ ಮತ್ತು ಸಮುದಾಯ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಸವಿತಾರವರು ಉಪಸ್ಥಿತರಿದ್ದು ಸ್ತ್ರೀಶಕ್ತಿ, ಸ್ವಸಹಾಯ ಗುಂಪು ಮತ್ತು ಸಂಜೀವಿನಿ ಗುಂಪುಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಮಹಿಳೆಯರು ಸ್ವಉದ್ಯೋಗದಿಂದ ಸದೃಢರಾಗಬೇಕು ಎಂದು ತಿಳಿಸಿದರು ಮತ್ತು ಸಂಜೀವಿನಿಯಿಂದ ಸಿಗಬಹುದಾದ ಪ್ರಯೋಜನಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಫೇಮಸ್ ಯೂತ್ ಕ್ಲಬ್ಬಿನ ಉಪಾಧ್ಯಕ್ಷರಾದ ಭೋಜಕೋಟ್ಯಾನ್, ಕಾರ್ಯದರ್ಶಿ ಹಿಮಕರ್ ಮತ್ತು ಬಶೀರ್ ಕಲ್ಲಾಪುರವರು ಉಪಸ್ಥಿತರಿದ್ದರು. ಮಹಿಳಾ ಮಂಡಲದ ಕಾರ್ಯದರ್ಶಿ ಕುಸುಮ ಎಚ್. ಕೋಟ್ಯಾನ್ ಮತ್ತು ಸಂಸ್ಥೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು ರವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತವನ್ನು ನಿರ್ವಹಿಸಿದರು, ಮಹಿಳಾ ಮಂಡಲದ ಅಧ್ಯಕ್ಷರಾದ ಪ್ರೇಮಲತಾ ಯೋಗಿಶ್ ರವರು ಧನ್ಯವಾದವನ್ನು ಅರ್ಪಿಸಿದರು, ಫೇಮಸ್ ಯೂತ್ ಕ್ಲಬ್ಬಿನ ಕ್ರೀಡಾ ಕಾರ್ಯದರ್ಶಿ ಶ್ರೀ ಸಂಪತ್ ಜೆ. ಶೆಟ್ಟಿ ಯವರು ಕಾರ್ಯಕ್ರಮವನ್ನು ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

23 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

1 day ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

1 day ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

2 days ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

5 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

6 days ago