ಪೆರ್ಲ: ಕುದುಕ್ಕೊಳಿ ಹವ್ವಾ ಹಸನ್ ಪೌಂಡೇಶನ್ ವತಿಯಿಂದ ನಡೆಸುತ್ತಿರುವ “ಪ್ರಕೃತಿಯೊಂದಿಗೆ ಮೈತ್ರಿ” ಅಭಿಯಾನದಂತೆ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಜಮೀನಿನಲ್ಲಿ ಉಚಿತವಾಗಿದೇಸೀ ಹಣ್ಣುಗಳ ಗಿಡಗಳನ್ನು ನೆಡಲಾಯಿತು.
ಹವ್ವಾ ಹಸನ್ ಪೌಂಡೇಶನ್ ನ ಸ್ಥಾಪಕ, ಅಬುದಾಬಿ ಇಂಡಿಯನ್ ಶಾಲೆಯ ಕಾರ್ಯದರ್ಶಿ, ಸಾಮಾಜಿಕ ಮುಂದಾಳು ಅಬ್ದುಲ್ ಮದುಮೂಲೆ ಗಿಡ ನೆಡುವ ಮೂಲಕ ಸಾಮಾಜಿಕ ಕಳಕಳಿಗೆ ಹೊಸ ಭಾಷ್ಯ ಬರೆದರು. ಭೂಮಿಯ ತಾಪಮಾನ ಹಾಗೂ ಮನುಷ್ಯನ ಬದುಕಿಗೆ ಹಸಿರು ವಾತವರಣ ಉಸಿರಾಗಬೇಕಿದ್ದು ಜಾತಿ ಮತ ಧರ್ಮ ಬೇಧ ಭಾವ ತೊರೆದು ಎಲ್ಲರೂ ಇದರ ಸಂರಕ್ಷಣೆ ಹಾಗೂ ಉಳಿವಿಕೆಗೆ ಪ್ರಯತ್ನ ಪಟ್ಟಲ್ಲಿ ಮುಂದಿನ ತಲೆಮಾರಿಗೆ ಇದೊಂದು ಉದಾತ್ತ ಕೊಡುಗೆಯಾಗಬಲ್ಲುದು ಎಂದು ಅವರು ಅಭಿಪ್ರಾಯಪಟ್ಟರು.
ಶ್ರೀ ಸುಬ್ರಾಯ ದೇವಸ್ಥಾನ ಆಡಳಿತ ಮೊಕ್ತೇಸರ ಪಡ್ಡಂಬೈಲು ಗುತ್ತುತಾರನಾಥ ರೈ ಕಾಟುಕುಕ್ಕೆ, ಕ್ಷೇತ್ರ ಆಡಳಿತ ಸಮಿತಿ ಟ್ರಸ್ಟಿ ರಿತೇಶ್ ಕಿರಣ್, ಸುಧಾಕರ ಕಲ್ಲಗದ್ದೆ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…