ಪೆರ್ಲ: ಕುದುಕ್ಕೊಳಿ ಹವ್ವಾ ಹಸನ್ ಪೌಂಡೇಶನ್ ವತಿಯಿಂದ ನಡೆಸುತ್ತಿರುವ “ಪ್ರಕೃತಿಯೊಂದಿಗೆ ಮೈತ್ರಿ” ಅಭಿಯಾನದಂತೆ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಜಮೀನಿನಲ್ಲಿ ಉಚಿತವಾಗಿದೇಸೀ ಹಣ್ಣುಗಳ ಗಿಡಗಳನ್ನು ನೆಡಲಾಯಿತು.
ಹವ್ವಾ ಹಸನ್ ಪೌಂಡೇಶನ್ ನ ಸ್ಥಾಪಕ, ಅಬುದಾಬಿ ಇಂಡಿಯನ್ ಶಾಲೆಯ ಕಾರ್ಯದರ್ಶಿ, ಸಾಮಾಜಿಕ ಮುಂದಾಳು ಅಬ್ದುಲ್ ಮದುಮೂಲೆ ಗಿಡ ನೆಡುವ ಮೂಲಕ ಸಾಮಾಜಿಕ ಕಳಕಳಿಗೆ ಹೊಸ ಭಾಷ್ಯ ಬರೆದರು. ಭೂಮಿಯ ತಾಪಮಾನ ಹಾಗೂ ಮನುಷ್ಯನ ಬದುಕಿಗೆ ಹಸಿರು ವಾತವರಣ ಉಸಿರಾಗಬೇಕಿದ್ದು ಜಾತಿ ಮತ ಧರ್ಮ ಬೇಧ ಭಾವ ತೊರೆದು ಎಲ್ಲರೂ ಇದರ ಸಂರಕ್ಷಣೆ ಹಾಗೂ ಉಳಿವಿಕೆಗೆ ಪ್ರಯತ್ನ ಪಟ್ಟಲ್ಲಿ ಮುಂದಿನ ತಲೆಮಾರಿಗೆ ಇದೊಂದು ಉದಾತ್ತ ಕೊಡುಗೆಯಾಗಬಲ್ಲುದು ಎಂದು ಅವರು ಅಭಿಪ್ರಾಯಪಟ್ಟರು.
ಶ್ರೀ ಸುಬ್ರಾಯ ದೇವಸ್ಥಾನ ಆಡಳಿತ ಮೊಕ್ತೇಸರ ಪಡ್ಡಂಬೈಲು ಗುತ್ತುತಾರನಾಥ ರೈ ಕಾಟುಕುಕ್ಕೆ, ಕ್ಷೇತ್ರ ಆಡಳಿತ ಸಮಿತಿ ಟ್ರಸ್ಟಿ ರಿತೇಶ್ ಕಿರಣ್, ಸುಧಾಕರ ಕಲ್ಲಗದ್ದೆ ಮೊದಲಾದವರು ಉಪಸ್ಥಿತರಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…