ಬಂಟ್ವಾಳ: ತುಂಬೆ ಡ್ಯಾಮ್ ಬಳಿ ಮೀನು ಹಿಡಿಯಲು ಹೋಗಿ ನದಿ ನೀರಿಗೆ ಬಿದ್ದು ಮೇಲಕ್ಕೆ ಬರುವುದಕ್ಕೆ ಒದ್ದಾಡಿ ಕೊನೆಗೆ ಡ್ಯಾಮ್ ಸಿಬಂದಿ ಹಾಗೂ ಬಂಟ್ವಾಳ ಅಗ್ನಿ ಶಾಮಕ ದಳದವರ ನೆರವಿನಿಂದ ಮೇಲಕ್ಕೆ ಬಂದ ಘಟನೆ ನಡೆದಿದೆ.
ಬೋಳಂತೂರು ನಿವಾಸಿ ರ್ಷಾದ್ ಅವರು ಅ. ೨ರಂದು ರಾತ್ರಿ ಮೀನು ಹಿಡಿಯಲು ಹೋಗಿ ನೀರಿಗೆ ಬಿದ್ದಿದ್ದಾರೆ. ಆದರೆ ಡ್ಯಾಮ್ ನಿಂದ ಸುಮಾರು 5 ಗೇಟ್ ಗಳಲ್ಲಿ ನೀರು ಹೊರಕ್ಕೆ ಹೋಗುತ್ತಿದ್ದು, ಹೀಗಾಗಿ ನೀರಿನ ರಭಸ ಹೆಚ್ಚಿದ್ದು ಮೇಲಕ್ಕೆ ಬರಲು ಎರಡು ಗಂಟೆಗಳ ಕಾಲ ಒದ್ದಾಡಬೇಕಿತು. ಆತನ ಬೊಬ್ಬೆ ಕೇಳಿ ಡ್ಯಾಮ್ ಸಿಬಂದಿ ರಕ್ಷಣೆಗೆ ಮುಂದಾಗಿದ್ದು, ಜೊತೆಗೆ ಪೊಲೀಸರು, ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೊನೆಗೆ ಆತನ ಹಗ್ಗದ ನೆರವಿನಿಂದ ಮೇಲಕ್ಕೆ ಬಂದಿದ್ದಾನೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…