ಮೂಡುಬಿದಿರೆ: ತಾಲೂಕಿನ ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಅಶ್ವತ್ಥಪುರ ದ 13 ರ ಹರೆಯದ ಬಾಲಕಿಯೋರ್ವಳು ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಅಶ್ವತ್ಥಪುರ ಮೂಡುಪಲ್ಲ ಮನೆಯ ಜೋಯ್ ಐವನ್ ಡಿ’ಸೋಜ-ವಿನೋದ ದಂಪತಿಯ ಪುತ್ರಿಯಾಗಿರುವ ಜೆಸ್ವಿಟಾ ಡಿ’ಸೋಜಾ ತನ್ನ ಉದ್ದನೆಯ ಕೂದಲಿನ ಅರ್ಧದಷ್ಟನ್ನು ಕತ್ತರಿಸಿ ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದಾಕೆ.
ಪತ್ರಿಕೆ ಸಹಿತ ಇತರ ಮಾಧ್ಯಗಳಲ್ಲಿ ಕೆಲ ದಾನಿಗಳು ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಕಾರ ನೀಡುತ್ತಿರುವುದನ್ನು ಗಮನಿಸಿರುವ ಜೊಸ್ವಿಟಾ ತಾನು ಕೂಡಾ ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಾಯ ಮಾಡಬೇಕೆಂಬ ಸಂಕಲ್ಪವನ್ನು ಕೈಗೊಂಡಿದ್ದಳು ಅದರಂತೆ ಬೆಳ್ಮಣಿನ ಹ್ಯೂಮಾನಿಟಿ ಸಂಸ್ಥೆಗೆ ತನ್ನ ಕೇಶವನ್ನು ನೀಡಿ ಗಮನ ಸೆಳೆದಿದ್ದಾರೆ.
ಹ್ಯುಮಾನಿಟಿ ಸಂಸ್ಥೆಯು ಕೂದಲನ್ನು ಕ್ಯಾನ್ಸರ್ ರೋಗಿಗೆ ಕೂದಲನ್ನು ತಲುಪಿಸಲಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…