ಮೂಡುಬಿದಿರೆ: ತಾಲೂಕಿನ ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಅಶ್ವತ್ಥಪುರ ದ 13 ರ ಹರೆಯದ ಬಾಲಕಿಯೋರ್ವಳು ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಅಶ್ವತ್ಥಪುರ ಮೂಡುಪಲ್ಲ ಮನೆಯ ಜೋಯ್ ಐವನ್ ಡಿ’ಸೋಜ-ವಿನೋದ ದಂಪತಿಯ ಪುತ್ರಿಯಾಗಿರುವ ಜೆಸ್ವಿಟಾ ಡಿ’ಸೋಜಾ ತನ್ನ ಉದ್ದನೆಯ ಕೂದಲಿನ ಅರ್ಧದಷ್ಟನ್ನು ಕತ್ತರಿಸಿ ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದಾಕೆ.
ಪತ್ರಿಕೆ ಸಹಿತ ಇತರ ಮಾಧ್ಯಗಳಲ್ಲಿ ಕೆಲ ದಾನಿಗಳು ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಕಾರ ನೀಡುತ್ತಿರುವುದನ್ನು ಗಮನಿಸಿರುವ ಜೊಸ್ವಿಟಾ ತಾನು ಕೂಡಾ ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಾಯ ಮಾಡಬೇಕೆಂಬ ಸಂಕಲ್ಪವನ್ನು ಕೈಗೊಂಡಿದ್ದಳು ಅದರಂತೆ ಬೆಳ್ಮಣಿನ ಹ್ಯೂಮಾನಿಟಿ ಸಂಸ್ಥೆಗೆ ತನ್ನ ಕೇಶವನ್ನು ನೀಡಿ ಗಮನ ಸೆಳೆದಿದ್ದಾರೆ.
ಹ್ಯುಮಾನಿಟಿ ಸಂಸ್ಥೆಯು ಕೂದಲನ್ನು ಕ್ಯಾನ್ಸರ್ ರೋಗಿಗೆ ಕೂದಲನ್ನು ತಲುಪಿಸಲಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…