ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾದ ಪಾಣೆಮಂಗಳೂರು ಉಕ್ಕಿನ ಸೇತುವೆಯ ಮಧ್ಯಭಾಗದಲ್ಲಿ ಸಣ್ಣದಾದ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸವಾರಿ ಮಾಡುವಂತೆ ಸ್ಥಳೀಯರು ತಿಳಿಸಿದ್ದಾರೆ.
ಅಕ್ಕರಂಗಡಿ ಅಂದರೆ ಪಾಣೆಮಂಗಳೂರು ರಸ್ತೆಯಲ್ಲಿ ಡಾಮರು ಎದ್ದು ಹೋಗಿದ್ದು, ಸಣ್ಣ ಗುಂಡಿಯಾಗಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ರಾತ್ರಿ ವೇಳೆಯಾಗಿರುವುದರಿಂದ ಇದರ ತೀವ್ರತೆ ಮತ್ತು ಸ್ಪಷ್ಟವಾದ ಚಿತ್ರಣ ಕಾಣುತ್ತಿಲ್ಲ.
ಈ ಹಿಂದೆ ಬಿ.ಸಿ.ರೋಡು ಕಡೆಯಿಂದ ಬರುವ ಭಾಗದಲ್ಲಿ ಸೇತುವೆ ಕುಸಿತ ಕಂಡು ಬಂದಿತ್ತು. ಹಾಗಾಗಿ ನೂತನ ಸೇತುವೆ ಆ ಸಂದರ್ಭದಲ್ಲಿ ನಿರ್ಮಾಣ ಮಾಡಲಾಗಿತ್ತು. ಪಾಣೆಮಂಗಳೂರು ಹಳೆಯ ಸೇತುವೆಯ ಅಡಿ ಭಾಗದಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ಅಕ್ರಮ ಮರಳುಗಾರಿಕೆ ನಡೆಯತ್ತಿದೆ ಎಂಬ ಆರೋಪಗಳು ಕೇಳುತ್ತಲೇ ಇವೆ.
ಇಲ್ಲಿ ಲೋಡ್ ಮಾಡಲಾದ ಮರಳು ಲಾರಿಗಳು ರಾತ್ರಿ ವೇಳೆ ಕದ್ದು ಮುಚ್ಚಿ ಓವರ್ ಲೋಡ್ ಹಾಕಿಕೊಂಡು ಹೋಗುತ್ತಿದ್ದು, ಇದೇ ಸೇತುವೆ ಬಿರುಕು ಕಾಣಿಸಿಕೊಳ್ಳಲು ಮುಳುವಾಯಿತಾ? ಎಂಬುವುದೇ ಸಾರ್ವಜನಿಕರ ಪ್ರಶ್ನೆಯಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…