ಮೂಡಬಿದಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ಬಸ್ಸು ಮತ್ತು ಆಟೋ ರಿಕ್ಷಾ ಮುಖಾಮುಖಿ ಢಿಕ್ಕಿಯಾದ ಪರಿಣಾಮವಾಗಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಮೃತಪಟ್ಟ ಸಂಪಿಗೆಯಲ್ಲಿ ನಡೆದಿದೆ.
ಸುರತ್ಕಲ್ ನ ಆಲಿಯಮ್ಮ (76) ಮೃತಪಟ್ಟ ವೃದ್ಧೆ. ಮೂಡುಬಿದಿರೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುರತ್ಕಲ್ ನಿಂದ ಬೀಪಾತಿಮ, ಆಯೀಷಾ ಹಾಗೂ ಆಲಿಯಮ್ಮ ಎಂಬವರು ಬರುತ್ತಿದ್ದ ಸಂದರ್ಭದಲ್ಲಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಸಂಪಿಗೆಯಲ್ಲಿ ಮೂಡುಬಿದಿರೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಆಳ್ವಾಸ್ ಕಾಲೇಜಿನ ಬಸ್ ಢಿಕ್ಕಿ ಹೊಡೆದಿದೆ. ಈ ಸಂದರ್ಭ ತೀವೃವಾಗಿ ಗಾಯಗೊಂಡ ಆಲಿಯಮ್ಮ ಕೊನೆಯುಸಿರೆಳೆದಿದ್ದಾರೆ. ಉಳಿದಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ದ್ದಾರೆ. ಬಸ್ಸಿನ ಚಾಲಕ ಸಂದೇಶ್ ನಾಯ್ಕ್ ನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…