ದಕ್ಷಿಣ ಕನ್ನಡ: ತುಳುವೆರೆ ಆಯನೊ ಕೂಟ, ತುಳು ವರ್ಲ್ಡ್, ಮಂದಾರ ಪ್ರತಿಷ್ಠಾನ ಸಹಯೋಗದೊಂದಿಗೆ ಯಕ್ಷಾರಾಧನಾ ಬಳಗ ಮಕ್ಕಳಿಂದ ಪ್ರಪ್ರಥಮ ಬಾರಿಗೆ ತುಳು ಸಂಪೂರ್ಣ ದೇವಿ ಮಹಾತ್ಮೆ “ಸಿರಿ ದೇವಿ ಮೈಮೆ” ಯಕ್ಷಗಾನ ಬಯಲಾಟ ನಡೆಸುವ ಬಗ್ಗೆ ಪೂರ್ವಭಾವಿ ಸಭೆ ಯಕ್ಷಾರಾಧನಾ ಬಳಗದ ಮುಖ್ಯಸ್ಥೆ ಪದ್ಮಶ್ರೀ ಭಟ್ ಹಾಗೂ ತುಳು ವರ್ಲ್ಡ್ ಮುಖ್ಯಸ್ಥ ರಾಜೇಶ್ ಆಳ್ವ ಬದಿಯಡ್ಕ ನೇತೃತ್ವದಲ್ಲಿ ನಡೆಯಿತು.
ಸಂಪೂರ್ಣ ದೇವಿ ಮಹಾತ್ಮೆ ತುಳು ಯಕ್ಷಗಾನಕ್ಕಾಗಿ ಸುಮಾರು 40 ಮಂದಿ ಮಕ್ಕಳನ್ನು ಈಗಾಗಲೇ ಆಯ್ಕೆ ಮಾಡಿದ್ದು, ತರಬೇತಿ ನೀಡಲು ಸಿದ್ಧತೆ ನಡೆದಿದೆ, ಯಕ್ಷಗಾನ ತರಬೇತುದಾರರಾದ ಶ್ರೀಕಾಂತ ರಾವ್ ಹಾಗೂ ಸ್ನೇಹಲತಾ ಇವರು, ಮಕ್ಕಳ ತರಬೇತಿಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿದ್ದು, ಕಾರ್ಯಕ್ರಮ ಸಂಪೂರ್ಣ ಯಶಸ್ಸಿಗೂ ಆಗುವ ನಿರೀಕ್ಷೆ ಇದೆ.
ಯಕ್ಷಗಾನ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಪತ್ರಕರ್ತ ಡಾಕ್ಟರ್ ಮಂದಾರ ರಾಜೇಶ್ ಭಟ್, ಲೋಕೇಶ್ ಏ.ಕೆ. ವಿಟ್ಲ, ಶ್ರೀಕಾಂತ ಭಟ್, ಸ್ನೇಹಲತಾ, ಸುಬ್ರಮಣ್ಯ ಭಟ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇತ್ತೀಚೆಗಷ್ಟೇ ತುಳುವೆರೆ ಆಯನೊ ಕೂಟ ವತಿಯಿಂದ ಸಂಪೂರ್ಣ ತುಳು ದೇವಿ ಮಹಾತ್ಮೆ ಪ್ರಪ್ರಥಮವಾಗಿ ಮಂಗಳೂರು ಪುರಭವನದಲ್ಲಿ ಯಶಸ್ವಿ ಪ್ರದರ್ಶನ ಕಂಡಿದ್ದು, ಈಗ ಮಕ್ಕಳಲ್ಲಿ ತುಳು ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿರುವುದು ಯಕ್ಷಗಾನ ಆಸಕ್ತರಿಗೆ ಹರುಷ ತಂದಿದೆ. ಮುಂದಿನ ದಿನಗಳಲ್ಲಿ ಕರಾವಳಿ ಕರ್ನಾಟಕದಾಧ್ಯಂತ ಯಕ್ಷಗಾನ ವಿಜೃಂಭಿಸಲಿ ಎಂಬುದು ಎಲ್ಲರ ಆಶಯ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…