ಜನ ಮನದ ನಾಡಿ ಮಿಡಿತ

Advertisement

ಕರಾವಳಿಯ ‘ಕುದ್ರು’ ಚಿತ್ರಕ್ಕೆ ಎಲ್ಲಿಲ್ಲದ ಬೇಡಿಕೆ..; ಅ.13 ರ0ದು ‘ಕುದ್ರು ಸಿನಿಮಾ’ ಕರ್ನಾಟಕದಾದ್ಯಂತ ಬಿಡುಗಡೆ

ಮೋಕ್ಷ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಭಾಸ್ಕರ್ ನಾಯ್ಡ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ’ ಎಂದು ಚಿತ್ರದ ನಾಯಕ ನಟ ಹರ್ಷಿತ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಚಿತ್ರ ತಂಡ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ, “ಕುದ್ರು’ ಎಂದರೆ ನೀರಿನಿಂದ ಸುತ್ತುವರೆದ ದ್ವೀಪ. ಈ ದ್ವೀಪದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ, ಆ ಸಮಯದಲ್ಲಿ ಸಂದೇಶವೊAದು ಬಂದು ಎಲ್ಲರಲ್ಲೂ ಮನಸ್ತಾಪ ಮೂಡುತ್ತದೆ. ಅನಂತರ ಕುತೂಹಲ ಮೂಡಿಸುವ ಕಥಾಹಂದರ ಈ ಚಿತ್ರದಲ್ಲಿದೆ. ಈಗಾಗಲೇ ಚಿತ್ರದ ಟ್ರೇಲರ್, ಹಾಗೂ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ.

ಈ ಚಿತ್ರದಲ್ಲಿ ಮುಸ್ಲಿಂ ಸಮುದಾಯದ ಹುಡುಗಿಯಾಗಿ ನಟಿ ಜೈನ ಡಿಸೋಜ, ಮುಸ್ಲಿಂ ಹುಡುಗನಾಗಿ ನಟ ಫರ್ಹಾನ್, ಮಂಗಳೂರಿನ ನಮಿತಾ ಪ್ರವೀಣ್ ಬಂಗೇರ, ಕಾಂತಾರ ಸತೀಶ್ ಆಚಾರ್ಯ ನಟಿಸಿದ್ದಾರೆ. ಕುದ್ರು ಚಿತ್ರದಲ್ಲಿ ನಾಯಕನಾಗಿ ಆಗಿ ಹರ್ಷಿತ್ ಶೆಟ್ಟಿ ಮಿಂಚಿದ್ದು, ನಾಯಕಿಯಾಗಿ ಪ್ರಿಯಾ ಹೆಗ್ಡೆ ಅಭಿನಯಿಸಿದ್ದಾರೆ. ಇನ್ನೂ ಚಿತ್ರಕ್ಕೆ ಪುರಾಣಿಕ್, ಪ್ರದೀಪ್ ಹಾಗೂ ಉಡುಪಿ ಪ್ರಜ್ವಲ್, ಇವರ ಛಾಯಗ್ರಾಹಣವಿದ್ದು, ಪ್ರತೀಕ್‌ರವರ ಸಂಗೀತ ನಿರ್ದೇಶನವಿದೆ. ಶ್ರೀನಿವಾಸ್ ಕಲಾಲ್ ಅವರ ಸಂಕಲನವಿರುವ ಕುದ್ರು ಚಿತ್ರಕ್ಕೆ ಉಡುಪಿ ಕೃಷ್ಣ ಆಚಾರ್ ಸಂಭಾಷಣೆ ಬರೆದಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!