ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ನಲ್ಲಿ ಭಾಸ್ಕರ್ ನಾಯ್ಡ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ’ ಎಂದು ಚಿತ್ರದ ನಾಯಕ ನಟ ಹರ್ಷಿತ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಚಿತ್ರ ತಂಡ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ, “ಕುದ್ರು’ ಎಂದರೆ ನೀರಿನಿಂದ ಸುತ್ತುವರೆದ ದ್ವೀಪ. ಈ ದ್ವೀಪದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ, ಆ ಸಮಯದಲ್ಲಿ ಸಂದೇಶವೊAದು ಬಂದು ಎಲ್ಲರಲ್ಲೂ ಮನಸ್ತಾಪ ಮೂಡುತ್ತದೆ. ಅನಂತರ ಕುತೂಹಲ ಮೂಡಿಸುವ ಕಥಾಹಂದರ ಈ ಚಿತ್ರದಲ್ಲಿದೆ. ಈಗಾಗಲೇ ಚಿತ್ರದ ಟ್ರೇಲರ್, ಹಾಗೂ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ.
ಈ ಚಿತ್ರದಲ್ಲಿ ಮುಸ್ಲಿಂ ಸಮುದಾಯದ ಹುಡುಗಿಯಾಗಿ ನಟಿ ಜೈನ ಡಿಸೋಜ, ಮುಸ್ಲಿಂ ಹುಡುಗನಾಗಿ ನಟ ಫರ್ಹಾನ್, ಮಂಗಳೂರಿನ ನಮಿತಾ ಪ್ರವೀಣ್ ಬಂಗೇರ, ಕಾಂತಾರ ಸತೀಶ್ ಆಚಾರ್ಯ ನಟಿಸಿದ್ದಾರೆ. ಕುದ್ರು ಚಿತ್ರದಲ್ಲಿ ನಾಯಕನಾಗಿ ಆಗಿ ಹರ್ಷಿತ್ ಶೆಟ್ಟಿ ಮಿಂಚಿದ್ದು, ನಾಯಕಿಯಾಗಿ ಪ್ರಿಯಾ ಹೆಗ್ಡೆ ಅಭಿನಯಿಸಿದ್ದಾರೆ. ಇನ್ನೂ ಚಿತ್ರಕ್ಕೆ ಪುರಾಣಿಕ್, ಪ್ರದೀಪ್ ಹಾಗೂ ಉಡುಪಿ ಪ್ರಜ್ವಲ್, ಇವರ ಛಾಯಗ್ರಾಹಣವಿದ್ದು, ಪ್ರತೀಕ್ರವರ ಸಂಗೀತ ನಿರ್ದೇಶನವಿದೆ. ಶ್ರೀನಿವಾಸ್ ಕಲಾಲ್ ಅವರ ಸಂಕಲನವಿರುವ ಕುದ್ರು ಚಿತ್ರಕ್ಕೆ ಉಡುಪಿ ಕೃಷ್ಣ ಆಚಾರ್ ಸಂಭಾಷಣೆ ಬರೆದಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…