ಮೂಡಬಿದಿರೆ: ಸರ್ಕಾರಿ ಪ್ರೌಢಶಾಲೆ ಪ್ರಾಂತ್ಯ ಮೂಡುಬಿದಿರೆ ಇದರ ತ್ರಿಭುವನ್ ಸ್ಕೌಟ್ಸ್ ಮತ್ತು ರಾಣಿ ಅಬ್ಬಕ್ಕ ಗೈಡ್ಸ್ ದಳದ ವಾರ್ಷಿಕ ಶಿಬಿರ ಮಂಗಳವಾರ ಸಮಾರೋಪಗೊಂಡಿತು.
ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲೋಕೇಶ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸಮಾಜದಲ್ಲಿ ಎಲ್ಲರ ಜತೆ ಹೊಂದಾಣಿಕೆಯನ್ನು ಮಾಡಿಕೊಂಡು ಜೀವನ ಹೇಗೆ ನಡೆಸುವುದು ಎಂಬುದರ ಬಗ್ಗೆ ಶಿಬಿರಗಳು ನಮಗೆ ಕಲಿಸಿಕೊಡುತ್ತವೆ. ವೈವಿದ್ಯತೆಯಲ್ಲಿ ಏಕತೆಯನ್ನು ಕಾಣುತ್ತೇವೆ. ಈ ಶಿಬಿರಗಳು ನಿಮಗೆ ಜೀವನಾನುಭವನ್ನು ನೀಡಿದೆ. ಮುಂದೆಯೂ ಇಂತಹ ಶಿಬಿರದಲ್ಲಿ ಭಾಗವಹಿಸುವಂತಹ ಅವಕಾಶಗಳು ಸಿಕ್ಕಿದಾಗ ಅದನ್ನು ಬಳಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ ಅವರು ಸರಕಾರಿ ಶಾಲೆಗಳು ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಮಾದರಿಯಾಗಿದೆ ಎಂದು ಶ್ಲಾಘಿಸಿದರು.
ಶಾಲಾ ಮುಖ್ಯ ಶಿಕ್ಷಕ ರಾಮಚಂದ್ರ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಪುರಸಭಾ ಸದಸ್ಯ ಇಕ್ಬಾಲ್ ಕರೀಂ, ಪತ್ರಕರ್ತೆ ಪ್ರೇಮಶ್ರೀ ಕಲ್ಲಬೆಟ್ಟು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಗೈಡ್ ಕ್ಯಾಪ್ಟನ್ ಸುಫಲಾ(ಎಲ್.ಟಿ.ಗೈಡ್) ಅವರನ್ನು ಗೌರವಿಸಲಾಯಿತು. ಸೈಟ್ ಗೈಡ್ ಕ್ಯಾಪ್ಟನ್ ಪ್ಲೇವಿ ಡಿಸೋಜ (ಪ್ರೀ ಎ.ಎಲ್.ಟಿ) ಉಪಸ್ಥಿತರಿದ್ದರು.
ಶಿಕ್ಷಕಿ ವೀಣಾ ಮಲ್ಯ ಸ್ವಾಗತಿಸಿದರು. ಶಿಬಿರದ ನಾಯಕತ್ವ ವಹಿಸಿರುವ ಸ್ಕೌಟ್ ಮಾಸ್ಟರ್ ನವೀನ್ ಚಂದ್ರ ಅಂಬೂರಿ ಶಿಬಿರದ ವರದಿ ವಾಚಿಸಿದರು. ಶಿಬಿರಾರ್ಥಿಗಳಾದ ತಿಲಕ್, ಶ್ರಾವ್ಯ ಹಾಗೂ ಎಸ್ ಡಿ ಎಂ ಉಜಿರೆಯ ರೇಂಜರ್ ಮಲ್ಲಿಕಾ ಅನಿಸಿಕೆಯನ್ನು ಹಂಚಿಕೊಂಡರು. ವಿದ್ಯಾರ್ಥಿನಿ ಖತೀಜಾ ಸಿಮಾಮ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ರೂಪಾ ಕಿಣಿ ವಂದಿಸಿದರು.
ಮೂರು ದಿನ ನಡೆದ ಶಿಬಿರದಲ್ಲಿ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಪ್ರಾಂತ್ಯ ಪ್ರೌಢಶಾಲಾ ವಠಾರದಲ್ಲಿ ನೆಡಲಾಯಿತು. ಶಿಬಿರಾರ್ಥಿಗಳನ್ನು ಕೊಣಾಜೆಕಲ್ಲಿಗೆ ಟ್ರಕ್ಕಿಂಗ್, ಮಿಜಾರಿನ ಶೋಭಾವನದಲ್ಲಿ ಗಿಡಮೂಲಿಕೆಗಳ ಬಗ್ಗೆ ಮಾಹಿತಿ, ಫಾರ್ಮಸಿಯ ಔಷಧ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಹಿಂದಿನ ಮತ್ತು ಆಧುನಿಕ ವಿಧಾನಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಶಿಬಿರದಲ್ಲಿ ಶ್ರಮದಾನ, ಯೋಗ-ಧ್ಯಾನ, ಮನೋರಂಜನ ಆಟಗಳು, ಪ್ರಥಮ ಚಿಕಿತ್ಸೆಯ ಬಗ್ಗೆ ಮಾಹಿತಿ, ಸ್ಕೌಟಿಂಗ್ ಇತಿಹಾಸ, ವನ ವಿದ್ಯಾ ಸಂಕೇತ, ಧ್ವಜ ಸ್ತಂಭ ರಚನೆ, ಸರ್ವಧರ್ಮ ಪ್ರಾರ್ಥನೆ, ಶಿಬಿರಾಗ್ನಿಯ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…