ಮೂಡಬಿದಿರೆ: ಸರ್ಕಾರಿ ಪ್ರೌಢಶಾಲೆ ಪ್ರಾಂತ್ಯ ಮೂಡುಬಿದಿರೆ ಇದರ ತ್ರಿಭುವನ್ ಸ್ಕೌಟ್ಸ್ ಮತ್ತು ರಾಣಿ ಅಬ್ಬಕ್ಕ ಗೈಡ್ಸ್ ದಳದ ವಾರ್ಷಿಕ ಶಿಬಿರ ಮಂಗಳವಾರ ಸಮಾರೋಪಗೊಂಡಿತು.
ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲೋಕೇಶ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸಮಾಜದಲ್ಲಿ ಎಲ್ಲರ ಜತೆ ಹೊಂದಾಣಿಕೆಯನ್ನು ಮಾಡಿಕೊಂಡು ಜೀವನ ಹೇಗೆ ನಡೆಸುವುದು ಎಂಬುದರ ಬಗ್ಗೆ ಶಿಬಿರಗಳು ನಮಗೆ ಕಲಿಸಿಕೊಡುತ್ತವೆ. ವೈವಿದ್ಯತೆಯಲ್ಲಿ ಏಕತೆಯನ್ನು ಕಾಣುತ್ತೇವೆ. ಈ ಶಿಬಿರಗಳು ನಿಮಗೆ ಜೀವನಾನುಭವನ್ನು ನೀಡಿದೆ. ಮುಂದೆಯೂ ಇಂತಹ ಶಿಬಿರದಲ್ಲಿ ಭಾಗವಹಿಸುವಂತಹ ಅವಕಾಶಗಳು ಸಿಕ್ಕಿದಾಗ ಅದನ್ನು ಬಳಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ ಅವರು ಸರಕಾರಿ ಶಾಲೆಗಳು ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಮಾದರಿಯಾಗಿದೆ ಎಂದು ಶ್ಲಾಘಿಸಿದರು.
ಶಾಲಾ ಮುಖ್ಯ ಶಿಕ್ಷಕ ರಾಮಚಂದ್ರ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಪುರಸಭಾ ಸದಸ್ಯ ಇಕ್ಬಾಲ್ ಕರೀಂ, ಪತ್ರಕರ್ತೆ ಪ್ರೇಮಶ್ರೀ ಕಲ್ಲಬೆಟ್ಟು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಗೈಡ್ ಕ್ಯಾಪ್ಟನ್ ಸುಫಲಾ(ಎಲ್.ಟಿ.ಗೈಡ್) ಅವರನ್ನು ಗೌರವಿಸಲಾಯಿತು. ಸೈಟ್ ಗೈಡ್ ಕ್ಯಾಪ್ಟನ್ ಪ್ಲೇವಿ ಡಿಸೋಜ (ಪ್ರೀ ಎ.ಎಲ್.ಟಿ) ಉಪಸ್ಥಿತರಿದ್ದರು.
ಶಿಕ್ಷಕಿ ವೀಣಾ ಮಲ್ಯ ಸ್ವಾಗತಿಸಿದರು. ಶಿಬಿರದ ನಾಯಕತ್ವ ವಹಿಸಿರುವ ಸ್ಕೌಟ್ ಮಾಸ್ಟರ್ ನವೀನ್ ಚಂದ್ರ ಅಂಬೂರಿ ಶಿಬಿರದ ವರದಿ ವಾಚಿಸಿದರು. ಶಿಬಿರಾರ್ಥಿಗಳಾದ ತಿಲಕ್, ಶ್ರಾವ್ಯ ಹಾಗೂ ಎಸ್ ಡಿ ಎಂ ಉಜಿರೆಯ ರೇಂಜರ್ ಮಲ್ಲಿಕಾ ಅನಿಸಿಕೆಯನ್ನು ಹಂಚಿಕೊಂಡರು. ವಿದ್ಯಾರ್ಥಿನಿ ಖತೀಜಾ ಸಿಮಾಮ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ರೂಪಾ ಕಿಣಿ ವಂದಿಸಿದರು.
ಮೂರು ದಿನ ನಡೆದ ಶಿಬಿರದಲ್ಲಿ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಪ್ರಾಂತ್ಯ ಪ್ರೌಢಶಾಲಾ ವಠಾರದಲ್ಲಿ ನೆಡಲಾಯಿತು. ಶಿಬಿರಾರ್ಥಿಗಳನ್ನು ಕೊಣಾಜೆಕಲ್ಲಿಗೆ ಟ್ರಕ್ಕಿಂಗ್, ಮಿಜಾರಿನ ಶೋಭಾವನದಲ್ಲಿ ಗಿಡಮೂಲಿಕೆಗಳ ಬಗ್ಗೆ ಮಾಹಿತಿ, ಫಾರ್ಮಸಿಯ ಔಷಧ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಹಿಂದಿನ ಮತ್ತು ಆಧುನಿಕ ವಿಧಾನಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಶಿಬಿರದಲ್ಲಿ ಶ್ರಮದಾನ, ಯೋಗ-ಧ್ಯಾನ, ಮನೋರಂಜನ ಆಟಗಳು, ಪ್ರಥಮ ಚಿಕಿತ್ಸೆಯ ಬಗ್ಗೆ ಮಾಹಿತಿ, ಸ್ಕೌಟಿಂಗ್ ಇತಿಹಾಸ, ವನ ವಿದ್ಯಾ ಸಂಕೇತ, ಧ್ವಜ ಸ್ತಂಭ ರಚನೆ, ಸರ್ವಧರ್ಮ ಪ್ರಾರ್ಥನೆ, ಶಿಬಿರಾಗ್ನಿಯ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…