ಜನ ಮನದ ನಾಡಿ ಮಿಡಿತ

Advertisement

ಅಸೌಖ್ಯದಿಂದ ಕನ್ಯಾನ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎನ್.ಕೆ.ಈಶ್ವರ ಭಟ್ ನೀರ್ಪಾಜೆ ನಿಧನ


ವಿಟ್ಲ; ಕನ್ಯಾನ ನಿವಾಸಿ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಸಂಘಟಕ, ಕನ್ಯಾನ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎನ್.ಕೆ.ಈಶ್ವರ ಭಟ್ ನೀರ್ಪಾಜೆ(84) ಅವರು ಅಸೌಖ್ಯದಿಂದ ಅ.12ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ವಿದ್ವಾಂಸ ದಿ.ನೀರ್ಪಾಜೆ ಭೀಮ ಭಟ್ ಅವರ ಸಹೋದರ ಈಶ್ವರ ಭಟ್ ಅವರು ಹಿಂದಿ ವಿಶಾರದ, ಸಂಸ್ಕೃತ ಭಾಷೆ ಅಭ್ಯಸಿಸಿದ್ದರು. ಕನ್ಯಾನ ಗ್ರಾ.ಪಂ.ಸದಸ್ಯರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ಯಾನ ಸರಕಾರಿ ಪಪೂ. ಕಾಲೇಜು, ಕನ್ಯಾನ, ಬಂಡಿತ್ತಡ್ಕ ಶಾಲಾಭಿವೃದ್ದಿ ಸಮಿತಿಯಲ್ಲಿ ಮತ್ತು ಕನ್ಯಾನ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿ ಸಂಘದಲ್ಲಿ ಶ್ರಮಿಸಿದ್ದಾರೆ. ಕನ್ಯಾನ ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ, ಕನ್ಯಾನ ಯಕ್ಷಗಾನ ಸಂಘ ಮತ್ತು ಯುವಕ ಸಂಘದ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಯಕ್ಷಗಾನ ಹವ್ಯಾಸಿ ಕಲಾವಿದರಾಗಿದ್ದ ಅವರು ತಾಳಮದ್ದಳೆ ಅರ್ಥಧಾರಿಯಾಗಿ, ಪಾತ್ರಧಾರಿಯಾಗಿದ್ದುಕೊಂಡು ಸ್ವತಃ ಸಂಘಟಿಸುತ್ತಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!