ವಿಟ್ಲ; ಕನ್ಯಾನ ನಿವಾಸಿ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಸಂಘಟಕ, ಕನ್ಯಾನ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎನ್.ಕೆ.ಈಶ್ವರ ಭಟ್ ನೀರ್ಪಾಜೆ(84) ಅವರು ಅಸೌಖ್ಯದಿಂದ ಅ.12ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ವಿದ್ವಾಂಸ ದಿ.ನೀರ್ಪಾಜೆ ಭೀಮ ಭಟ್ ಅವರ ಸಹೋದರ ಈಶ್ವರ ಭಟ್ ಅವರು ಹಿಂದಿ ವಿಶಾರದ, ಸಂಸ್ಕೃತ ಭಾಷೆ ಅಭ್ಯಸಿಸಿದ್ದರು. ಕನ್ಯಾನ ಗ್ರಾ.ಪಂ.ಸದಸ್ಯರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ಯಾನ ಸರಕಾರಿ ಪಪೂ. ಕಾಲೇಜು, ಕನ್ಯಾನ, ಬಂಡಿತ್ತಡ್ಕ ಶಾಲಾಭಿವೃದ್ದಿ ಸಮಿತಿಯಲ್ಲಿ ಮತ್ತು ಕನ್ಯಾನ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿ ಸಂಘದಲ್ಲಿ ಶ್ರಮಿಸಿದ್ದಾರೆ. ಕನ್ಯಾನ ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ, ಕನ್ಯಾನ ಯಕ್ಷಗಾನ ಸಂಘ ಮತ್ತು ಯುವಕ ಸಂಘದ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಯಕ್ಷಗಾನ ಹವ್ಯಾಸಿ ಕಲಾವಿದರಾಗಿದ್ದ ಅವರು ತಾಳಮದ್ದಳೆ ಅರ್ಥಧಾರಿಯಾಗಿ, ಪಾತ್ರಧಾರಿಯಾಗಿದ್ದುಕೊಂಡು ಸ್ವತಃ ಸಂಘಟಿಸುತ್ತಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…