ಜನ ಮನದ ನಾಡಿ ಮಿಡಿತ

Advertisement

ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ನಿಂದ ರೈಲ್ವೇ ಹಳಿಗೆ ಬಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರ

ಬ0ಟ್ವಾಳ; ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ, ಕಾಂಕ್ರೀಟ್ ಮಿಕ್ಸರ್ ಯಂತ್ರವೊ0ದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ.

ಘಟನೆಯಿಂದ ಸದ್ಯ ಯಾವುದೇ ಪ್ರಾಣಾಪಾಯ ಅಗಿಲ್ಲ. ಅದೃಷ್ಟವಶಾತ್ ರೈಲು ಅ ಸಮಯದಲ್ಲಿ ಬರದೆ ಇದ್ದುದರಿಂದ ಯಾವುದೇ ಅವಘಡಗಳು ಸಂಭವಿಸಿಲ್ಲ.
ರೈಲು ಆಗಮಿಸುವ ಮೊದಲು ಯಂತ್ರವನ್ನು ತೆರವು ಗೊಳಿಸಬೇಕಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ನವರು ಕಾರ್ಯ ಪ್ರವೃತರಾಗಿ ತೆರವು ಕಾರ್ಯ ನಿರ್ವಹಿಸಿದರು.

ಕೋಟ್ಯಾಂತರ ರೂ ವೆಚ್ಚದಲ್ಲಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾರ್ಯಗಳಿಗಾಗಿ ಇತ್ತೀಚೆಗೆ ಶಿಲಾನ್ಯಾಸ ನಡೆದಿದ್ದು, ಇದೀಗ ಕಾಮಗಾರಿ ಆರಂಭವಾಗಿದೆ. ರೈಲ್ವೆ ಪ್ಲಾಟ್ ಪಾರ್ಮ್ ನ ಸನಿಹದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ನಡೆಸುವ ಕಂಪೆನಿಯ ಕಾಂಕ್ರೀಟ್ ಮಿಕ್ಸರ್ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡ ಹಳಿಗೆ ಉರುಳಿ ಬಿದ್ದಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಹಳಷ್ಟು ಎಚ್ಚರಿಕೆಯಿಂದ ಇಂತಹ ಕಾಮಗಾರಿ ನಡೆಯಬೇಕಾಗಿದೆ. ಯಾಕೆಂದರೆ ಇಂತಹ ಸೂಕ್ಷ್ಮ ಜಾಗದಲ್ಲಿ ಕಾಮಗಾರಿ ನಡೆಸುವ ವೇಳೆ ನುರಿತ ಹಾಗೂ ವಿಶೇಷ ಅನುಭವದ ಕಾರ್ಮಿಕರು ಕೆಲಸ ನಿರ್ವಹಿಸಬೇಕಾಗಿದೆ.
ಅಜಾಗರೂಕತೆಯಿಂದ ಕಾಮಗಾರಿ ನಡೆಸಿದ ಸಂದರ್ಭದಲ್ಲಿ ರೈಲು ಅಪಘಾತಕ್ಕೆ ಕಾರಣವಾಗಬಹುದು,ಮತ್ತು ಬಹು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!