ಬ0ಟ್ವಾಳ; ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ, ಕಾಂಕ್ರೀಟ್ ಮಿಕ್ಸರ್ ಯಂತ್ರವೊ0ದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ.
ಘಟನೆಯಿಂದ ಸದ್ಯ ಯಾವುದೇ ಪ್ರಾಣಾಪಾಯ ಅಗಿಲ್ಲ. ಅದೃಷ್ಟವಶಾತ್ ರೈಲು ಅ ಸಮಯದಲ್ಲಿ ಬರದೆ ಇದ್ದುದರಿಂದ ಯಾವುದೇ ಅವಘಡಗಳು ಸಂಭವಿಸಿಲ್ಲ.
ರೈಲು ಆಗಮಿಸುವ ಮೊದಲು ಯಂತ್ರವನ್ನು ತೆರವು ಗೊಳಿಸಬೇಕಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ನವರು ಕಾರ್ಯ ಪ್ರವೃತರಾಗಿ ತೆರವು ಕಾರ್ಯ ನಿರ್ವಹಿಸಿದರು.
ಕೋಟ್ಯಾಂತರ ರೂ ವೆಚ್ಚದಲ್ಲಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾರ್ಯಗಳಿಗಾಗಿ ಇತ್ತೀಚೆಗೆ ಶಿಲಾನ್ಯಾಸ ನಡೆದಿದ್ದು, ಇದೀಗ ಕಾಮಗಾರಿ ಆರಂಭವಾಗಿದೆ. ರೈಲ್ವೆ ಪ್ಲಾಟ್ ಪಾರ್ಮ್ ನ ಸನಿಹದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ನಡೆಸುವ ಕಂಪೆನಿಯ ಕಾಂಕ್ರೀಟ್ ಮಿಕ್ಸರ್ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡ ಹಳಿಗೆ ಉರುಳಿ ಬಿದ್ದಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಹಳಷ್ಟು ಎಚ್ಚರಿಕೆಯಿಂದ ಇಂತಹ ಕಾಮಗಾರಿ ನಡೆಯಬೇಕಾಗಿದೆ. ಯಾಕೆಂದರೆ ಇಂತಹ ಸೂಕ್ಷ್ಮ ಜಾಗದಲ್ಲಿ ಕಾಮಗಾರಿ ನಡೆಸುವ ವೇಳೆ ನುರಿತ ಹಾಗೂ ವಿಶೇಷ ಅನುಭವದ ಕಾರ್ಮಿಕರು ಕೆಲಸ ನಿರ್ವಹಿಸಬೇಕಾಗಿದೆ.
ಅಜಾಗರೂಕತೆಯಿಂದ ಕಾಮಗಾರಿ ನಡೆಸಿದ ಸಂದರ್ಭದಲ್ಲಿ ರೈಲು ಅಪಘಾತಕ್ಕೆ ಕಾರಣವಾಗಬಹುದು,ಮತ್ತು ಬಹು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…