ಬ0ಟ್ವಾಳ; ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ, ಕಾಂಕ್ರೀಟ್ ಮಿಕ್ಸರ್ ಯಂತ್ರವೊ0ದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ.
ಘಟನೆಯಿಂದ ಸದ್ಯ ಯಾವುದೇ ಪ್ರಾಣಾಪಾಯ ಅಗಿಲ್ಲ. ಅದೃಷ್ಟವಶಾತ್ ರೈಲು ಅ ಸಮಯದಲ್ಲಿ ಬರದೆ ಇದ್ದುದರಿಂದ ಯಾವುದೇ ಅವಘಡಗಳು ಸಂಭವಿಸಿಲ್ಲ.
ರೈಲು ಆಗಮಿಸುವ ಮೊದಲು ಯಂತ್ರವನ್ನು ತೆರವು ಗೊಳಿಸಬೇಕಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ನವರು ಕಾರ್ಯ ಪ್ರವೃತರಾಗಿ ತೆರವು ಕಾರ್ಯ ನಿರ್ವಹಿಸಿದರು.
ಕೋಟ್ಯಾಂತರ ರೂ ವೆಚ್ಚದಲ್ಲಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾರ್ಯಗಳಿಗಾಗಿ ಇತ್ತೀಚೆಗೆ ಶಿಲಾನ್ಯಾಸ ನಡೆದಿದ್ದು, ಇದೀಗ ಕಾಮಗಾರಿ ಆರಂಭವಾಗಿದೆ. ರೈಲ್ವೆ ಪ್ಲಾಟ್ ಪಾರ್ಮ್ ನ ಸನಿಹದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ನಡೆಸುವ ಕಂಪೆನಿಯ ಕಾಂಕ್ರೀಟ್ ಮಿಕ್ಸರ್ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡ ಹಳಿಗೆ ಉರುಳಿ ಬಿದ್ದಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಹಳಷ್ಟು ಎಚ್ಚರಿಕೆಯಿಂದ ಇಂತಹ ಕಾಮಗಾರಿ ನಡೆಯಬೇಕಾಗಿದೆ. ಯಾಕೆಂದರೆ ಇಂತಹ ಸೂಕ್ಷ್ಮ ಜಾಗದಲ್ಲಿ ಕಾಮಗಾರಿ ನಡೆಸುವ ವೇಳೆ ನುರಿತ ಹಾಗೂ ವಿಶೇಷ ಅನುಭವದ ಕಾರ್ಮಿಕರು ಕೆಲಸ ನಿರ್ವಹಿಸಬೇಕಾಗಿದೆ.
ಅಜಾಗರೂಕತೆಯಿಂದ ಕಾಮಗಾರಿ ನಡೆಸಿದ ಸಂದರ್ಭದಲ್ಲಿ ರೈಲು ಅಪಘಾತಕ್ಕೆ ಕಾರಣವಾಗಬಹುದು,ಮತ್ತು ಬಹು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…