ಜನ ಮನದ ನಾಡಿ ಮಿಡಿತ

Advertisement

ತಾಪಮಾನ ಏರಿಕೆ, ಬೆಳೆ ಪ್ರಮಾಣ ಇಳಿಕೆ, ಹವಾಮಾನ ಇಲಾಖೆ ನೀಡಿತು ಎಚ್ಚರಿಕೆ!!!

ದಕ್ಷಿಣ ಕನ್ನಡ : ಹವಾಮಾನ ವೈಪರಿತ್ಯದಿಂದಾಗಿ ಮತ್ತು ಮಳೆ ಕೊರತೆಯಿಂದಾಗಿ, ಈ ವರ್ಷ ಮುಂದಿನ ದಿನಗಳು ಎಂದಿನಂತಿಲ್ಲ.ವಿಪರೀತ ತಾಪಮಾನ ಏರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.


     ಸಾಮಾನ್ಯಕ್ಕಿಂತ  09% ತಾಪಮಾನ ಏರಿಕೆಯಾಗಲಿದ್ದು  ಇದು ಮನುಷ್ಯ ಸೇರಿದಂತೆ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದಾಗಿದೆ, ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
 ಇಡೀ ಭಾರತ ದೇಶದಲ್ಲಿ ಹವಾಮಾನ ವೈಪರೀತ್ಯದ ಪರಿಣಾಮ ಸಮಸ್ಯೆ ಕಾಡಬಹುದಾಗಿದ್ದು, ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ. ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲೇಬೇಕಿದೆ.
      ತಾಪಮಾನ ಏರಿಕೆಯಾಗಿ ಮಣ್ಣಿನ ಫಲವತ್ತತೆ, ಹಾಗೂ ಸೂಕ್ಷ್ಮಜೀವಿಗಳ ಮೇಲೆ ಪರಿಣಾಮ ಬೀರಲಿದೆ  ಮಣ್ಣಿನಲ್ಲಿ  ತೇವಾಂಶ ಕಡಿಮೆಯಾಗಿ  ಇಳುವರಿ ಕಡೆಮೆ ಬರುವ ಲಕ್ಷಣಗಳು ಕಾಣುತ್ತಿವೆ.

ಹಾಗಾಗಿ ಉತ್ಪಾದೆನೆಯಲ್ಲಿ ಶೇ 10ರಿಂದ 15 ರಷ್ಟು ಕುಸಿತ ಕಾಣಲಿದೆ ಎಂದು ಕೃಷಿ ಇಲಾಖೆಯ ಮೂಲಗಳು ತಿಳಿಸಿವೆ.
   ಆದರೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ  ದಕ್ಷಿಣ ಜಿಲ್ಲೆಗಳಿಗೆ ಕಡಿಮೆ ಪ್ರಮಾಣದ ಶಾಖ ಇರಲಿದೆ. ಹಾಗೂ ಏಕದಳ ಮತ್ತು ಬೇಳೆಕಾಳು ಬೆಳೆಯುವ ಪ್ರದೇಶಗಳಾಧ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಪ್ರದೇಶಗಳಲ್ಲಿ ಪ್ರಸ್ತುತ ಹವಾಮಾನ ಪರಿಸ್ಥಿತಿಯಿಂದಾಗಿ ಬೆಳೆಗಳ ಮೇಲೆ ಹೆಚ್ಚಿನ ಪರಿಣಾಮ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!