ದಕ್ಷಿಣ ಕನ್ನಡ : ಹವಾಮಾನ ವೈಪರಿತ್ಯದಿಂದಾಗಿ ಮತ್ತು ಮಳೆ ಕೊರತೆಯಿಂದಾಗಿ, ಈ ವರ್ಷ ಮುಂದಿನ ದಿನಗಳು ಎಂದಿನಂತಿಲ್ಲ.ವಿಪರೀತ ತಾಪಮಾನ ಏರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಸಾಮಾನ್ಯಕ್ಕಿಂತ 09% ತಾಪಮಾನ ಏರಿಕೆಯಾಗಲಿದ್ದು ಇದು ಮನುಷ್ಯ ಸೇರಿದಂತೆ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದಾಗಿದೆ, ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ಇಡೀ ಭಾರತ ದೇಶದಲ್ಲಿ ಹವಾಮಾನ ವೈಪರೀತ್ಯದ ಪರಿಣಾಮ ಸಮಸ್ಯೆ ಕಾಡಬಹುದಾಗಿದ್ದು, ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ. ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲೇಬೇಕಿದೆ.
ತಾಪಮಾನ ಏರಿಕೆಯಾಗಿ ಮಣ್ಣಿನ ಫಲವತ್ತತೆ, ಹಾಗೂ ಸೂಕ್ಷ್ಮಜೀವಿಗಳ ಮೇಲೆ ಪರಿಣಾಮ ಬೀರಲಿದೆ ಮಣ್ಣಿನಲ್ಲಿ ತೇವಾಂಶ ಕಡಿಮೆಯಾಗಿ ಇಳುವರಿ ಕಡೆಮೆ ಬರುವ ಲಕ್ಷಣಗಳು ಕಾಣುತ್ತಿವೆ.
ಹಾಗಾಗಿ ಉತ್ಪಾದೆನೆಯಲ್ಲಿ ಶೇ 10ರಿಂದ 15 ರಷ್ಟು ಕುಸಿತ ಕಾಣಲಿದೆ ಎಂದು ಕೃಷಿ ಇಲಾಖೆಯ ಮೂಲಗಳು ತಿಳಿಸಿವೆ.
ಆದರೆ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ದಕ್ಷಿಣ ಜಿಲ್ಲೆಗಳಿಗೆ ಕಡಿಮೆ ಪ್ರಮಾಣದ ಶಾಖ ಇರಲಿದೆ. ಹಾಗೂ ಏಕದಳ ಮತ್ತು ಬೇಳೆಕಾಳು ಬೆಳೆಯುವ ಪ್ರದೇಶಗಳಾಧ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಪ್ರದೇಶಗಳಲ್ಲಿ ಪ್ರಸ್ತುತ ಹವಾಮಾನ ಪರಿಸ್ಥಿತಿಯಿಂದಾಗಿ ಬೆಳೆಗಳ ಮೇಲೆ ಹೆಚ್ಚಿನ ಪರಿಣಾಮ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…