ಜನ ಮನದ ನಾಡಿ ಮಿಡಿತ

Advertisement

“ಕುದ್ರು ಚಿತ್ರ” ರಿಲೀಸ್‌; ಭಾರತ್ ಸಿನಿಮಾಸ್‌ನಲ್ಲಿ ಭರ್ಜರಿ ಪ್ರದರ್ಶನ

ಮಂಗಳೂರು; ಕರಾವಳಿಯಲ್ಲಿ ಸೆನ್ಸೆಷನಲ್ ಮೂಡಿಸಿದ್ದ, ಮೋಕ್ಷ ಕ್ರಿಯೇಷನ್ಸ್ ಬ್ಯಾನರ್‌ನಡಿ, ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಇಂದು ಕರ್ನಾಟಕದಾದ್ಯಂತ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.

ಈಗಾಗಲೇ ವಿಭಿನ್ನ ಟೈಟಲ್ ಮೂಲಕ ಸಿನಿಪ್ರಿಯರ ಮನಗೆದ್ದ ಕುದ್ರು ಸಿನಿಮಾದ ಬಿಡುಗಡೆಗೆ ಭಾರತ್ ಸಿನಿಮಾಸ್‌ನಲ್ಲಿ ಇಂದು ತೆಲಿಕೆದ ಬೊಳ್ಳಿ ದೇವ್‌ದಾಸ್ ಕಾಪಿಕಾಡ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ರು. ಬಳಿಕ ಮಾತಾನಾಡಿದ ಇವರು, ಸೌದಿಅರೇಬಿಯಾದಲ್ಲಿ ಕುದ್ರು ಸಿನಿಮಾದ ಶೂಟಿಂಗ್ ನಡೆದಿರುವುದು ತುಳುಚಿತ್ರರಂಗಕ್ಕೆ ಹೆಮ್ಮೆಯ ವಿಚಾರವಾಗಿದೆ. ಹಾಗೇನೆ ನೈಜ ಕಥೆಯನ್ನು ಒಳಗೊಂಡ ‘ಕುದ್ರು ಚಿತ್ರ ಗೆಲ್ಲಲ್ಲಿ ಎಂದು ಶುಭಹಾರೈಸಿದ್ದಾರೆ.

ಇದೇ ವೇಳೆ ಚಿತ್ರದ ನಿರ್ದೇಶಕ ಭಾಸ್ಕರ್‌ನಾಯ್ಕ್ ಮಾತಾನಾಡಿ, ಈಗಾಗಲೇ ಚಿತ್ರದ ಪ್ರಿಮಿಯರ್ ಶೋ ಎಲ್ಲೆಡೆ ಸಾಕಷ್ಟು ಪ್ರಶಂಸೆ ಪಡೆದಿದೆ.

ಇದೀಗ ಚಿತ್ರ ರಿಲೀಸ್ ಆಗಿದ್ದು, ತುಳು ಚಿತ್ರದಲ್ಲಿ ಕಾಮಿಡಿ ಇರತ್ತೆ ಆದರೆ ಈ ಚಿತ್ರದಲ್ಲಿ ಸ್ವಲ್ಪ ಬದಾಲಾವಣೆ ಮಾಡಲಾಗಿದೆ. ಇದನ್ನ ಜನರು ಇಷ್ಟಪಡುತ್ತಾರೆ ಎಂಬ ಭರವಸೆ ಇದೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಅಂತೆಯೇ ವಿಶ್ವವಿದ್ಯಾನಿಲಯ ಕಾಲೇಜಿನ ಫ್ರೊಫೆಸರ್ ಲಕ್ಷ್ಮಣ,, ಹಾಗೂ ನಿರ್ದೇಶಕರ ಆಪ್ತರಾದ ಪ್ರವೀಣ್‌ರವರು ಕುದ್ರು ಚಿತ್ರದ ಯಶಸ್ಸಿಗೆ ಶುಭಹಾರೈಸಿದ್ದಾರೆ. ಇನ್ನೂ ಚಿತ್ರದ ನಾಯಕ ನಟ ಹರ್ಷಿತ್ ಶೆಟ್ಟಿ ಹಾಗೂ ನಾಯಕ ನಟಿ ಪ್ರಿಯಾ ಹೆಗ್ಡೆ ಚಿತ್ರದಲ್ಲಿ ಅಭಿನಯಿಸಿದ ಅನುಭವವನ್ನು ಹಂಚಿಕೊAಡಿದ್ದಾರೆ. ಕರಾವಳಿಯ ವಿಭಿನ್ನ ಕಥಾಹಂದರವನ್ನು ಒಳಗೊಂಡ ಈ ಕುದ್ರು ಚಿತ್ರ ಸಿನಿಪ್ರಿಯರ ಮನಗೆದ್ದು, ಸಕ್ಸಸ್ ಕಾಣಲಿ ಅನ್ನೋದು ನಮ್ಮ ಆಶಯ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!