ಮಂಗಳೂರು; ಕರಾವಳಿಯಲ್ಲಿ ಸೆನ್ಸೆಷನಲ್ ಮೂಡಿಸಿದ್ದ, ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ನಡಿ, ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಇಂದು ಕರ್ನಾಟಕದಾದ್ಯಂತ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.
ಈಗಾಗಲೇ ವಿಭಿನ್ನ ಟೈಟಲ್ ಮೂಲಕ ಸಿನಿಪ್ರಿಯರ ಮನಗೆದ್ದ ಕುದ್ರು ಸಿನಿಮಾದ ಬಿಡುಗಡೆಗೆ ಭಾರತ್ ಸಿನಿಮಾಸ್ನಲ್ಲಿ ಇಂದು ತೆಲಿಕೆದ ಬೊಳ್ಳಿ ದೇವ್ದಾಸ್ ಕಾಪಿಕಾಡ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ರು. ಬಳಿಕ ಮಾತಾನಾಡಿದ ಇವರು, ಸೌದಿಅರೇಬಿಯಾದಲ್ಲಿ ಕುದ್ರು ಸಿನಿಮಾದ ಶೂಟಿಂಗ್ ನಡೆದಿರುವುದು ತುಳುಚಿತ್ರರಂಗಕ್ಕೆ ಹೆಮ್ಮೆಯ ವಿಚಾರವಾಗಿದೆ. ಹಾಗೇನೆ ನೈಜ ಕಥೆಯನ್ನು ಒಳಗೊಂಡ ‘ಕುದ್ರು ಚಿತ್ರ ಗೆಲ್ಲಲ್ಲಿ ಎಂದು ಶುಭಹಾರೈಸಿದ್ದಾರೆ.
ಇದೇ ವೇಳೆ ಚಿತ್ರದ ನಿರ್ದೇಶಕ ಭಾಸ್ಕರ್ನಾಯ್ಕ್ ಮಾತಾನಾಡಿ, ಈಗಾಗಲೇ ಚಿತ್ರದ ಪ್ರಿಮಿಯರ್ ಶೋ ಎಲ್ಲೆಡೆ ಸಾಕಷ್ಟು ಪ್ರಶಂಸೆ ಪಡೆದಿದೆ.
ಇದೀಗ ಚಿತ್ರ ರಿಲೀಸ್ ಆಗಿದ್ದು, ತುಳು ಚಿತ್ರದಲ್ಲಿ ಕಾಮಿಡಿ ಇರತ್ತೆ ಆದರೆ ಈ ಚಿತ್ರದಲ್ಲಿ ಸ್ವಲ್ಪ ಬದಾಲಾವಣೆ ಮಾಡಲಾಗಿದೆ. ಇದನ್ನ ಜನರು ಇಷ್ಟಪಡುತ್ತಾರೆ ಎಂಬ ಭರವಸೆ ಇದೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಅಂತೆಯೇ ವಿಶ್ವವಿದ್ಯಾನಿಲಯ ಕಾಲೇಜಿನ ಫ್ರೊಫೆಸರ್ ಲಕ್ಷ್ಮಣ,, ಹಾಗೂ ನಿರ್ದೇಶಕರ ಆಪ್ತರಾದ ಪ್ರವೀಣ್ರವರು ಕುದ್ರು ಚಿತ್ರದ ಯಶಸ್ಸಿಗೆ ಶುಭಹಾರೈಸಿದ್ದಾರೆ. ಇನ್ನೂ ಚಿತ್ರದ ನಾಯಕ ನಟ ಹರ್ಷಿತ್ ಶೆಟ್ಟಿ ಹಾಗೂ ನಾಯಕ ನಟಿ ಪ್ರಿಯಾ ಹೆಗ್ಡೆ ಚಿತ್ರದಲ್ಲಿ ಅಭಿನಯಿಸಿದ ಅನುಭವವನ್ನು ಹಂಚಿಕೊAಡಿದ್ದಾರೆ. ಕರಾವಳಿಯ ವಿಭಿನ್ನ ಕಥಾಹಂದರವನ್ನು ಒಳಗೊಂಡ ಈ ಕುದ್ರು ಚಿತ್ರ ಸಿನಿಪ್ರಿಯರ ಮನಗೆದ್ದು, ಸಕ್ಸಸ್ ಕಾಣಲಿ ಅನ್ನೋದು ನಮ್ಮ ಆಶಯ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…