ಮಂಗಳೂರು; ಕರಾವಳಿಯಲ್ಲಿ ಸೆನ್ಸೆಷನಲ್ ಮೂಡಿಸಿದ್ದ, ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ನಡಿ, ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಇಂದು ಕರ್ನಾಟಕದಾದ್ಯಂತ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.
ಈಗಾಗಲೇ ವಿಭಿನ್ನ ಟೈಟಲ್ ಮೂಲಕ ಸಿನಿಪ್ರಿಯರ ಮನಗೆದ್ದ ಕುದ್ರು ಸಿನಿಮಾದ ಬಿಡುಗಡೆಗೆ ಭಾರತ್ ಸಿನಿಮಾಸ್ನಲ್ಲಿ ಇಂದು ತೆಲಿಕೆದ ಬೊಳ್ಳಿ ದೇವ್ದಾಸ್ ಕಾಪಿಕಾಡ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ರು. ಬಳಿಕ ಮಾತಾನಾಡಿದ ಇವರು, ಸೌದಿಅರೇಬಿಯಾದಲ್ಲಿ ಕುದ್ರು ಸಿನಿಮಾದ ಶೂಟಿಂಗ್ ನಡೆದಿರುವುದು ತುಳುಚಿತ್ರರಂಗಕ್ಕೆ ಹೆಮ್ಮೆಯ ವಿಚಾರವಾಗಿದೆ. ಹಾಗೇನೆ ನೈಜ ಕಥೆಯನ್ನು ಒಳಗೊಂಡ ‘ಕುದ್ರು ಚಿತ್ರ ಗೆಲ್ಲಲ್ಲಿ ಎಂದು ಶುಭಹಾರೈಸಿದ್ದಾರೆ.
ಇದೇ ವೇಳೆ ಚಿತ್ರದ ನಿರ್ದೇಶಕ ಭಾಸ್ಕರ್ನಾಯ್ಕ್ ಮಾತಾನಾಡಿ, ಈಗಾಗಲೇ ಚಿತ್ರದ ಪ್ರಿಮಿಯರ್ ಶೋ ಎಲ್ಲೆಡೆ ಸಾಕಷ್ಟು ಪ್ರಶಂಸೆ ಪಡೆದಿದೆ.
ಇದೀಗ ಚಿತ್ರ ರಿಲೀಸ್ ಆಗಿದ್ದು, ತುಳು ಚಿತ್ರದಲ್ಲಿ ಕಾಮಿಡಿ ಇರತ್ತೆ ಆದರೆ ಈ ಚಿತ್ರದಲ್ಲಿ ಸ್ವಲ್ಪ ಬದಾಲಾವಣೆ ಮಾಡಲಾಗಿದೆ. ಇದನ್ನ ಜನರು ಇಷ್ಟಪಡುತ್ತಾರೆ ಎಂಬ ಭರವಸೆ ಇದೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಅಂತೆಯೇ ವಿಶ್ವವಿದ್ಯಾನಿಲಯ ಕಾಲೇಜಿನ ಫ್ರೊಫೆಸರ್ ಲಕ್ಷ್ಮಣ,, ಹಾಗೂ ನಿರ್ದೇಶಕರ ಆಪ್ತರಾದ ಪ್ರವೀಣ್ರವರು ಕುದ್ರು ಚಿತ್ರದ ಯಶಸ್ಸಿಗೆ ಶುಭಹಾರೈಸಿದ್ದಾರೆ. ಇನ್ನೂ ಚಿತ್ರದ ನಾಯಕ ನಟ ಹರ್ಷಿತ್ ಶೆಟ್ಟಿ ಹಾಗೂ ನಾಯಕ ನಟಿ ಪ್ರಿಯಾ ಹೆಗ್ಡೆ ಚಿತ್ರದಲ್ಲಿ ಅಭಿನಯಿಸಿದ ಅನುಭವವನ್ನು ಹಂಚಿಕೊAಡಿದ್ದಾರೆ. ಕರಾವಳಿಯ ವಿಭಿನ್ನ ಕಥಾಹಂದರವನ್ನು ಒಳಗೊಂಡ ಈ ಕುದ್ರು ಚಿತ್ರ ಸಿನಿಪ್ರಿಯರ ಮನಗೆದ್ದು, ಸಕ್ಸಸ್ ಕಾಣಲಿ ಅನ್ನೋದು ನಮ್ಮ ಆಶಯ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…