ಮಂಗಳೂರು; ಕರಾವಳಿಯಲ್ಲಿ ಸೆನ್ಸೆಷನಲ್ ಮೂಡಿಸಿದ್ದ, ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ನಡಿ, ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಇಂದು ಕರ್ನಾಟಕದಾದ್ಯಂತ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.
ಈಗಾಗಲೇ ವಿಭಿನ್ನ ಟೈಟಲ್ ಮೂಲಕ ಸಿನಿಪ್ರಿಯರ ಮನಗೆದ್ದ ಕುದ್ರು ಸಿನಿಮಾದ ಬಿಡುಗಡೆಗೆ ಭಾರತ್ ಸಿನಿಮಾಸ್ನಲ್ಲಿ ಇಂದು ತೆಲಿಕೆದ ಬೊಳ್ಳಿ ದೇವ್ದಾಸ್ ಕಾಪಿಕಾಡ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ರು. ಬಳಿಕ ಮಾತಾನಾಡಿದ ಇವರು, ಸೌದಿಅರೇಬಿಯಾದಲ್ಲಿ ಕುದ್ರು ಸಿನಿಮಾದ ಶೂಟಿಂಗ್ ನಡೆದಿರುವುದು ತುಳುಚಿತ್ರರಂಗಕ್ಕೆ ಹೆಮ್ಮೆಯ ವಿಚಾರವಾಗಿದೆ. ಹಾಗೇನೆ ನೈಜ ಕಥೆಯನ್ನು ಒಳಗೊಂಡ ‘ಕುದ್ರು ಚಿತ್ರ ಗೆಲ್ಲಲ್ಲಿ ಎಂದು ಶುಭಹಾರೈಸಿದ್ದಾರೆ.
ಇದೇ ವೇಳೆ ಚಿತ್ರದ ನಿರ್ದೇಶಕ ಭಾಸ್ಕರ್ನಾಯ್ಕ್ ಮಾತಾನಾಡಿ, ಈಗಾಗಲೇ ಚಿತ್ರದ ಪ್ರಿಮಿಯರ್ ಶೋ ಎಲ್ಲೆಡೆ ಸಾಕಷ್ಟು ಪ್ರಶಂಸೆ ಪಡೆದಿದೆ.
ಇದೀಗ ಚಿತ್ರ ರಿಲೀಸ್ ಆಗಿದ್ದು, ತುಳು ಚಿತ್ರದಲ್ಲಿ ಕಾಮಿಡಿ ಇರತ್ತೆ ಆದರೆ ಈ ಚಿತ್ರದಲ್ಲಿ ಸ್ವಲ್ಪ ಬದಾಲಾವಣೆ ಮಾಡಲಾಗಿದೆ. ಇದನ್ನ ಜನರು ಇಷ್ಟಪಡುತ್ತಾರೆ ಎಂಬ ಭರವಸೆ ಇದೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಅಂತೆಯೇ ವಿಶ್ವವಿದ್ಯಾನಿಲಯ ಕಾಲೇಜಿನ ಫ್ರೊಫೆಸರ್ ಲಕ್ಷ್ಮಣ,, ಹಾಗೂ ನಿರ್ದೇಶಕರ ಆಪ್ತರಾದ ಪ್ರವೀಣ್ರವರು ಕುದ್ರು ಚಿತ್ರದ ಯಶಸ್ಸಿಗೆ ಶುಭಹಾರೈಸಿದ್ದಾರೆ. ಇನ್ನೂ ಚಿತ್ರದ ನಾಯಕ ನಟ ಹರ್ಷಿತ್ ಶೆಟ್ಟಿ ಹಾಗೂ ನಾಯಕ ನಟಿ ಪ್ರಿಯಾ ಹೆಗ್ಡೆ ಚಿತ್ರದಲ್ಲಿ ಅಭಿನಯಿಸಿದ ಅನುಭವವನ್ನು ಹಂಚಿಕೊAಡಿದ್ದಾರೆ. ಕರಾವಳಿಯ ವಿಭಿನ್ನ ಕಥಾಹಂದರವನ್ನು ಒಳಗೊಂಡ ಈ ಕುದ್ರು ಚಿತ್ರ ಸಿನಿಪ್ರಿಯರ ಮನಗೆದ್ದು, ಸಕ್ಸಸ್ ಕಾಣಲಿ ಅನ್ನೋದು ನಮ್ಮ ಆಶಯ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…