ಬಂಟ್ವಾಳ: ಸ್ಕೂಟರ್ ಸವಾರನಿಗೆ ರಿಕ್ಷಾ ಡಿಕ್ಕಿಯಾಗಿ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಾವೂರ ಗ್ರಾಮದ ಪೂಪಾಡಿಕಟ್ಟೆ ಎಂಬಲ್ಲಿ ನಡೆದಿದೆ.
ಪ್ರವೀಣ್ ಶೆಟ್ಟಿ (41) ಗಾಯಗೊಂಡ ಸ್ಕೂಟರ್ ಸವಾರ. ಪ್ರವೀಣ್ ಅವರು ಬಂಟ್ವಾಳದಿಂದ ಸರಪಾಡಿಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ನಾವೂರ ಸಮೀಪದ ಪೂಪಾಡಿಕಟ್ಟೆ ಎಂಬಲ್ಲಿ ಎದುರು ಕಡೆ ಅಂದರೆ ಸರಪಾಡಿ ಕಡೆಯಿಂದ ಬರುತ್ತಿದ್ದ ರಿಕ್ಷಾವೊಂದು ನೇರವಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಬಿದ್ದು ಗಾಯವಾಗಿದೆ. ಗಾಯಗೊಂಡ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಟೋ ರಿಕ್ಷಾ ಚಾಲಕ ಮುಸ್ತಾಫನ ನಿರ್ಲಕ್ಷ್ಯತನದ ಚಾಲನೆ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರವೀಣ್ ಅವರ ಸಹೋದರ ಠಾಣೆಗೆ ದೂರು ನೀಡಿದ್ದಾರೆ. ಟ್ರಾಫಿಕ್ ಪೋಲೀಸ್ ಠಾಣೆಯ ಲ್ಲಿ ಬಗ್ಗೆ ದೂರು ದಾಖಲಾಗಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…